Asianet Suvarna News Asianet Suvarna News

ಮುಂದಿನ ತಿಂಗಳು ಹಸೆಮಣೆ ಏರಬೇಕಿದ್ದ ವರ ಕೋವಿಡ್‌ನಿಂದ ಸಾವು

ಮುಂದಿನ ತಿಂಗಳು ಹಸೆಮಣೆ ಏರಬೇಕಿದ್ದ ಯುವಕ, ಕೊರೊನಾದಿಂದ ಇಂದು ಸಾವನ್ನಪ್ಪಿದ್ದಾನೆ. ಐಸಿಯು, ಆಕ್ಸಿಜನ್ ಸಿಗದೇ 28 ವರ್ಷದ ಸಾಗರ್ ಎಂಬಾತ ಮೃತಪಟ್ಟಿದ್ದಾನೆ. 

ಬೆಂಗಳೂರು (ಮೇ. 01): ಮುಂದಿನ ತಿಂಗಳು ಹಸೆಮಣೆ ಏರಬೇಕಿದ್ದ ಯುವಕ, ಕೊರೊನಾದಿಂದ ಇಂದು ಸಾವನ್ನಪ್ಪಿದ್ದಾನೆ. ಐಸಿಯು, ಆಕ್ಸಿಜನ್ ಸಿಗದೇ 28 ವರ್ಷದ ಸಾಗರ್ ಎಂಬಾತ ಮೃತಪಟ್ಟಿದ್ದಾನೆ. ಯುಗಾದಿ ಹಬ್ಬದ ನಂತರ ಸಾಗರ್‌ಗೆ ಜ್ವರ, ಭೇದಿ ಕಾಣಿಸಿಕೊಂಡಿತ್ತು. ಹೀಗಾಗಿ ಹೋಂ ಐಸೋಲೇಷನ್‌ನಲ್ಲಿದ್ದರು. ಕೊನೆ ಕ್ಷಣದಲ್ಲಿ ಸೋಂಕು ತೀವ್ರಗೊಂಡು ಆಕ್ಸಿಜನ್ ಸಿಗದೇ ಸಾವನ್ನಪ್ಪಿದ್ದಾನೆ. 

ತಿಪಟೂರಿನ ಕುಮಾರ್ ಆಸ್ಪತ್ರೆಯಲ್ಲಿ ಫ್ರೀ ಚಿಕಿತ್ಸೆ, ಡಾ. ಶ್ರೀಧರ್‌ರಿಂದ ಮಾದರಿ ಕಾರ್ಯ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona