Asianet Suvarna News Asianet Suvarna News

ಕಾಂಗ್ರೆಸ್‌ನ ಕೆಲ ನಾಯಕರು ಬೇಲ್‌ನಲ್ಲಿದ್ದಾರೆ, ಹೋರಾಟ ಮಾಡಲು ಅವರಿಗೆ ನೈತಿಕತೆಯಿಲ್ಲ: ಸಿ ಟಿ ರವಿ

ಮುಂದಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಇಂದಿನಿಂದ 2 ದಿನಗಳ ಕಾಲ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭಗೊಂಡಿದೆ. ಈ ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯಕಾರ್ಶಿ ಸಿ ಟಿ ರವಿ ಭಾಗಿಯಾಗಲು ಆಗಮಿಸಿದ್ದಾರೆ.

ಬೆಂಗಳೂರು (ಏ. 16): ಮುಂದಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ (Assembly Election) ಈಗಿನಿಂದಲೇ ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಇಂದಿನಿಂದ 2 ದಿನಗಳ ಕಾಲ ಹೊಸಪೇಟೆಯಲ್ಲಿ (Hosapete) ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭಗೊಂಡಿದೆ.

ಈಶ್ವರಪ್ಪ ಬಂಧನ ಆಗ್ರಹಿಸಿ ಕಾಂಗ್ರೆಸ್ ರಾಜ್ಯವ್ಯಾಪಿ ಪ್ರತಿಭಟನೆ: ಶಿವಮೊಗ್ಗದಲ್ಲಿ ಡಿಕೆಶಿ ನೇತೃತ್ವ!

ಈ ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯಕಾರ್ಶಿ ಸಿ ಟಿ ರವಿ ಭಾಗಿಯಾಗಲು ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಸಿ ಟಿ ರವಿ, ಮಾಧ್ಯಮಗಳೊಂದಿಗೆ ಮಾತನಾಡುತ್ತಾ, 'ಕಾಂಗ್ರೆಸ್‌ಗೆ ಹೋರಾಟ ಮಾಡಲು ನೈತಿಕತೆಯಿದೆಯಾ..? ಕಾಂಗ್ರೆಸ್‌ ಕೆಲ ನಾಯಕರು ಬೇಲ್‌ನಲ್ಲಿದ್ದಾರೆ. ಅರ್ಕಾವತಿ ಬಡಾವಣೆ ಹಗರಣ ತನಿಖೆಯಾದರೆ ಕೆಲವರು ಜೈಲಿಗೆ ಹೋಗುತ್ತಾರೆ, ಕೆಲವರು ಜಾಮೀನು ತೆಗೆದುಕೊಳ್ಳಬೇಕಾಗುತ್ತದೆ' ಎಂದು ವಾಗ್ದಾಳಿ ನಡೆಸಿದರು. 

Video Top Stories