ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವು; ಡಿಸಿಎಂ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ
ಮಸ್ಕಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇಲ್ಲಿ ವಿಜಯೇಂದ್ರ ತಂತ್ರಗಾರಿಕೆ ವರ್ಕೌಟ್ ಆಗಿಲ್ವಾ ಎಂಬ ಪ್ರಶ್ನೆಗೆ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ಧಾರೆ.
ಬೆಂಗಳೂರು (ಮೇ. 02): ಮಸ್ಕಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇಲ್ಲಿ ವಿಜಯೇಂದ್ರ ತಂತ್ರಗಾರಿಕೆ ವರ್ಕೌಟ್ ಆಗಿಲ್ವಾ ಎಂಬ ಪ್ರಶ್ನೆಗೆ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ಧಾರೆ.
'ನಮ್ಮ ಪಕ್ಷದಲ್ಲಿ ಎಲ್ಲರೂ ಒಟ್ಟಾರೆ ಕೆಲಸ ಮಾಡುತ್ತೇವೆ. ಯಾರ ಮೇಲೆಯೂ ಸೋಲಿನ ಹೊಣೆ ಹೊರಿಸಲಾಗುವುದಿಲ್ಲ ಎಂದಿದ್ದಾರೆ. ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಇದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎನ್ನುವ ಪ್ರಶ್ನೆಗೆ, ಕೊರೊನಾ ನಿಯಂತ್ರಣಕ್ಕೆ ನಾವು ಪ್ರಯತ್ನಿಸುತ್ತಿದ್ದೇವೆ. ನಿರ್ವಹಣೆ ಮಾಡಲು ಕಡಿಮೆ ಸಮಯ ಸಿಕ್ಕಿದೆ. ನಮ್ಮ ಪ್ರಯತ್ನ ಮುಂದುವರೆದಿದೆ ಎಂದಿದ್ದಾರೆ.