ಕಂಟ್ರೋಲ್ ತಪ್ಪಿದ ಕೊರೊನಾ: ಇಂದಿನ ಮಹತ್ವದ ಸಭೆಯಲ್ಲಿ ಲಾಕ್ಡೌನ್ ಭವಿಷ್ಯ ನಿರ್ಧಾರ
ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರುತ್ತಿದೆ. ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಮಾರ್ಗದರ್ಶನದಂತೆ ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಬೆಂಗಳೂರು (ಏ. 19): ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರುತ್ತಿದೆ. ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಮಾರ್ಗದರ್ಶನದಂತೆ ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ರಾಜ್ಯದ 8 ನಗರಗಳಲ್ಲಿ ಜಾರಿಗೊಳಿಸಿರುವ ರಾತ್ರಿ ಕರ್ಫ್ಯೂ ಮಂಗಳವಾರ ಮುಗಿಯುತ್ತಿದ್ದು, ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವ ಸಾಧ್ಯತೆ ಇದೆ. ಜನರ ದಟ್ಟಣೆ ನಿಯಂತ್ರಿಸಲು ಕಠಿಣ ಕ್ರಮಗಳಿಗೆ ಮುಂದಾಗಲಿದ್ದು, ಜನತಾ ಕರ್ಫ್ಯೂ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆದಿದೆ.
ಆಸ್ಪತ್ರೆಗೆ ಬಂದ್ರೂ ಬೆಡ್ ಸಿಗಲ್ಲ, ಬೆಡ್ ಸಿಕ್ಕರೂ ICU ಸಿಗಲ್ಲ, ಸೋಂಕಿತರ ಗೋಳು ಕೇಳೋರಿಲ್ಲ..!