ಮುಂದಿನ ವಿಧಾನಸಭಾ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ; ಶಾ ಹೇಳಿಕೆ ಹಿಂದಿನ ಲೆಕ್ಕಾಚಾರವಿದು!
- ಬೊಮ್ಮಾಯಿಗೆ ಶಾ ಮಣೆ: ಬಿಜೆಪಿಯಲ್ಲಿ ಸಂಚಲನ
- ಯಡಿಯೂರಪ್ಪ ಬೆಂಬಲಿಗರ ಬೇಸರ?
- ಸಾಮೂಹಿಕ ನಾಯಕತ್ವದ ಪರ ಮಾತು
ಬೆಂಗಳೂರು (ಸೆ. 04): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತಿತರ ಹಿರಿಯ ನಾಯಕರು ಹಿಂದೆ ಸರಿಸಲ್ಪಟ್ಟರೇ ಎಂಬ ಪ್ರಶ್ನೆ ಬಿಜೆಪಿ ಪಾಳೆಯದಲ್ಲಿ ಗಂಭೀರವಾಗಿ ಕೇಳಿಬರುತ್ತಿದೆ. ಒಟ್ಟಿನಲ್ಲಿ ಅಮಿತ್ ಶಾ ಹೇಳಿಕೆಗೆ ಬಿಜೆಪಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ರಾಜ್ಯ ಬಿಜೆಪಿ ಸಂಚಲನ ಮೂಡಿಸಿದ ಶಾ: ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು ಹೀಗೆ
ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ಮಾತೂ ಪ್ರಸ್ತಾಪವಾಗಿದೆ. ಬಿಜೆಪಿ ನಾಯಕರೊಬ್ಬಬ್ಬರದು ಒಂದೊಂದು ಮಾತು. ಕೆಲವರು ಶಾ ಹೇಳಿಕೆಯನ್ನು ಸಮರ್ಥಿಸಿದರೆ, ಕೆಲವರು ಅಪಸ್ವರ ಎತ್ತಿದ್ದಾರೆ. ಹಾಗಾದರೆ ಅಮಿತ್ ಶಾ ಹೇಳಿಕೆ ಹಿಂದಿನ ಲೆಕ್ಕಾಚಾರವೇನು.?