ಕೊರೊನಾದಿಂದ ASI ಸಾವು; ಠಾಣೆಯ ಪೇದೆಗೂ ಸೋಂಕು ಸಾಧ್ಯತೆ
ಬೆಂಗಳೂರಿನಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಎಎಸ್ಐಯೊಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ವಿವಿಪುರಂ ಸಂಚಾರಿ ಠಾಣೆಯ ಟ್ರಾಫಿಕ್ ಎಎಸ್ಐ ಮೃತಪಟ್ಟಿದ್ದಾರೆ. ಇನ್ನು 15 ದಿನಗಳಲ್ಲಿ ಇವರು ನಿವೃತ್ತಿಯಾಗಬೇಕಿತ್ತು. ಇವರು ಅನಾರೋಗ್ಯದಿಂದಲೂ ಬಳಲುತ್ತಿದ್ದು ಕರ್ತವ್ಯಕ್ಕೆ ರಜೆ ಹಾಕಿದ್ದರು. ಆ ಬಳಿಕ ಮತ್ತೆ 4 ದಿನ ಕೆಲಸಕ್ಕೆ ಹಾಜರಾಗಿದ್ದರು. ಇದ್ದಕ್ಕಿದ್ದಂತೆ ಅನಾರೋಗ್ಯ ಉಂಟಾಗಿ ಮತ್ತೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಬೆಂಗಳೂರು (ಜೂ. 16): ರಾಜಧಾನಿಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಎಎಸ್ಐಯೊಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ವಿವಿಪುರಂ ಸಂಚಾರಿ ಠಾಣೆಯ ಟ್ರಾಫಿಕ್ ಎಎಸ್ಐ ಮೃತಪಟ್ಟಿದ್ದಾರೆ. ಇನ್ನು 15 ದಿನಗಳಲ್ಲಿ ಇವರು ನಿವೃತ್ತಿಯಾಗಬೇಕಿತ್ತು. ಇವರು ಅನಾರೋಗ್ಯದಿಂದಲೂ ಬಳಲುತ್ತಿದ್ದು ಕರ್ತವ್ಯಕ್ಕೆ ರಜೆ ಹಾಕಿದ್ದರು. ಆ ಬಳಿಕ ಮತ್ತೆ 4 ದಿನ ಕೆಲಸಕ್ಕೆ ಹಾಜರಾಗಿದ್ದರು. ಇದ್ದಕ್ಕಿದ್ದಂತೆ ಅನಾರೋಗ್ಯ ಉಂಟಾಗಿ ಮತ್ತೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕರ್ನಾಟಕಕ್ಕೆ ಕೊರೊನಾ ಕಾಲಿಟ್ಟು 100 ದಿನಗಳು; ಅಂಕಿ- ಅಂಶಗಳು ಇಲ್ಲಿವೆ ನೋಡಿ...!
ಇದೀಗ ಇವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಇವರ ಮನೆಯವರನ್ನು ಕ್ವಾರಂಟೈನ್ನಲ್ಲಿಡಲಾಗಿದೆ. ದುರಾದೃಷ್ಟವೆಂದರೆ ಇವರು ಕೆಲಸ ಮಾಡುತ್ತಿದ್ದ ಠಾಣೆಯ ಪೇದೆಗೂ ಕೊರೊನಾ ಬಂದಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!