ಸದನದಲ್ಲಿ ಬೆಲೆ ಏರಿಕೆ ಬಗ್ಗೆ ಪ್ರಸ್ತಾಪ; ಸರ್ಕಾರಕ್ಕೆ ಎಚ್ಡಿಕೆ ಸವಾಲ್..!
ವಿಧಾನಸಭಾ ಅಧಿವೇಶನದಲ್ಲಿ ಬೆಲೆ ಏರಿಕೆ ಬಗ್ಗೆ ಎಚ್ಡಿಕೆ ಪ್ರಸ್ತಾಪ ಮಾಡಿದ್ದಾರೆ. ಅನಿವಾರ್ಯ ಸಂದರ್ಭದಲ್ಲಿ ಏರಿಕೆಯಾಗುತ್ತದೆ. ಈ ಬಗ್ಗೆ ಹೋರಾಟ ಮಾಡಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಎಚ್ಡಿಕೆ ಹೇಳಿದ್ದಾರೆ.
ಬೆಂಗಳೂರು (ಸೆ. 16): ವಿಧಾನಸಭಾ ಅಧಿವೇಶನದಲ್ಲಿ ಬೆಲೆ ಏರಿಕೆ ಬಗ್ಗೆ ಎಚ್ಡಿಕೆ ಪ್ರಸ್ತಾಪ ಮಾಡಿದ್ದಾರೆ. ಅನಿವಾರ್ಯ ಸಂದರ್ಭದಲ್ಲಿ ಏರಿಕೆಯಾಗುತ್ತದೆ. ಈ ಬಗ್ಗೆ ಹೋರಾಟ ಮಾಡಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಎಚ್ಡಿಕೆ ಹೇಳಿದ್ದಾರೆ. ಈ ವೇಳೆ ಮೈತ್ರಿ ಸರ್ಕಾರದ ಏನಾಗಿತ್ತು ಎಂಬುದನ್ನು ಸ್ಮರಿಸಿಕೊಂಡಿದ್ದಾರೆ.
ಸರ್ಕಾರದ ಹಣ ಖರ್ಚು ಮಾಡುವಾಗ ಅದು ಬಡವನಿಗೆ ತಲುಪುವ ಹಾಗೆ ಯೋಜನೆ ರೂಪಿಸಬೇಕು. ಇದು ಸರ್ಕಾರದ ಮುಂದಿನ ಸವಾಲು. ನಾನು ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದಾಗ ಇದೇ ಸವಾಲು ಎದುರಿಸಿದ್ದೆ.