Asianet Suvarna News Asianet Suvarna News

ಸಿಎಂ ಬದಲಾವಣೆ ವಿಚಾರ: ವರಿಷ್ಠರಿಗೆ ಒತ್ತಡ ಹಾಕಲ್ಲ ಎಂದ ಜಯಮೃತ್ಯುಂಜಯ ಶ್ರೀ

ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ರನ್ನು ಜಯಮೃತ್ಯುಂಜಯ ಸ್ವಾಮೀಜಿ ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
 

ಬೆಂಗಳೂರು (ಜೂ. 18): ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ರನ್ನು ಜಯಮೃತ್ಯುಂಜಯ ಸ್ವಾಮೀಜಿ ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಸಿಎಂ ವಿರುದ್ಧ ಬಹಿರಂಗ ಹೇಳಿಕೆ, ವಿಶ್ವನಾಥ್ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹ

'ಮುಖ್ಯಮಂತ್ರಿಗಳನ್ನು ಉಳಿಸುವ ಅಧಿಕಾರ, ಬದಲಾಯಿಸುವ ಅಧಿಕಾರ ಇರುವುದು ಶಾಸಕಾಂಗ ಸಭೆಗೆ ಮಾತ್ರ. ನಾವು ಮಠಾಧೀಶರು ಈ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ. ವರಿಷ್ಠರು ನಮ್ಮ ಸಲಹೆ ಕೇಳಿದರೆ ಕೊಡುತ್ತೇವೆ. ಸಿಎಂ ಬದಲಾವಣೆ ವಿಚಾರವಾಗಿ ನಾವು ಒತ್ತಡ ಹಾಕುವುದಿಲ್ಲ' ಎಂದು ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.