ರಾಜ್ಯಪಾಲರಿಂದ ಸುಳ್ಳು ಹೇಳಿಸುವ ಕೆಲಸ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ

ಸರ್ಕಾರ ರಾಜ್ಯಪಾಲರಿಂದ ಸುಳ್ಳುಗಳನ್ನು ಹೇಳಿಸಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು: ನಮ್ಮ ಕಾಲದಲ್ಲಿ‌‌ ಜಾರಿಗೆ ತಂದ ಯೋಜನೆಗಳನ್ನು ತಮ್ಮ ಸಾಧನೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraja Bommai) ಹೇಳಿದ್ದಾರೆ. ಇಂದು ಆರಂಭವಾದ ಜಂಟಿ ಅಧಿವೇಶನದಲ್ಲಿ(Session) ರಾಜ್ಯಪಾಲರ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಂತಹ ಸಪ್ಪೆ, ನಿರಾಸೆಯ ಭಾಷಣ ಯಾವತ್ತೂ ಕೇಳಿರಲಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿರುವ ಜನವಿರೊಧಿ ಸರ್ಕಾರ ಇರುವುದನ್ನು ತೋರಿಸುತ್ತದೆ.‌ ರಾಜ್ಯಪಾಲರ(Governor) ಭಾಷಣದಲ್ಲಿ ಸರ್ಕಾರ ಯಾವುದೆ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಜಲಜೀವನ್ ಮಿಷನ್, ಬಡವರಿಗೆ ಮನೆ‌ ನಿರ್ಮಾಣ ಎಲ್ಲವೂ ನಮ್ಮ ಯೋಜನೆಗಳು ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ನಮ್ಮ ಅವಧಿಯಲ್ಲಿ ಆರಂಭಿಸಿಧ್ದೇವೆ ಅದನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಂಡಿದ್ದಾರೆ‌ ಎಂದು ಹೇಳಿದರು. ಧರ್ಮದ ವಿಚಾರದಲ್ಲಿ ಸಂವಿಧಾನದಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುವಂತೆ ಹೇಳಿದೆ. ಆದರೆ, ಇವರು ಒಂದೇ ಧರ್ಮವನ್ನು ತುಷ್ಟೀಕರಣ ಮಾಡುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ:  Karnataka Budget: ಸರ್ಕಾರದ ವಿರುದ್ಧ ‘ಮೈತ್ರಿ’ ಅಸ್ತ್ರ: ಗದ್ದಲದ ನಡುವೆಯೇ ರಾಜ್ಯ ಬಜೆಟ್‌ ಮಂಡನೆಗೆ ಸಜ್ಜು !

Related Video