Asianet Suvarna News Asianet Suvarna News

ಕನ್ನಡಿಗರು- ಮರಾಠಿಗರ ನಡುವೆ ಕಲ್ಲು ತೂರಾಟ; ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್

ಬೆಳಗಾವಿಯಲ್ಲಿ ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ ಜೋರಾಗುತ್ತಿದೆ. ವಿವಾದಿತ ಜಾಗ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಯನ್ನು ಖಂಡಿಸಿ ಮರಾಠಿಗರು ರೊಚ್ಚಿಗೆದ್ದಿದ್ದಾರೆ. ರಾಯಣ್ಣ ಪ್ರತಿಮೆ ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆಗೆ ಮುಂದಾಗಿದ್ದು ಪೊಲೀಸರು ತಡೆದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ. 

First Published Aug 28, 2020, 2:16 PM IST | Last Updated Aug 28, 2020, 2:19 PM IST

ಬೆಂಗಳೂರು (ಆ. 28): ಬೆಳಗಾವಿಯಲ್ಲಿ ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ ಜೋರಾಗುತ್ತಿದೆ. ವಿವಾದಿತ ಜಾಗ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಯನ್ನು ಖಂಡಿಸಿ ಮರಾಠಿಗರು ರೊಚ್ಚಿಗೆದ್ದಿದ್ದಾರೆ. ರಾಯಣ್ಣ ಪ್ರತಿಮೆ ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆಗೆ ಮುಂದಾಗಿದ್ದು ಪೊಲೀಸರು ತಡೆದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ. 

ಕನ್ನಡಿಗರು- ಮರಾಠಿಗರ ನಡುವೆ ಕಲ್ಲು ತೂರಾಟ ನಡೆದಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮದವಾಗಿ ಸ್ಥಳದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 

ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ ; ಪೊಲೀಸರ ಜೊತೆ ಮರಾಠಿಗರ ವಾಗ್ವಾದ, ಸ್ಥಳದಲ್ಲಿ ಬಿಗುವಿನ ವಾತಾವರಣ