ಪಾದರಾಯನಪುರ ಪುಂಡರನ್ನು ಬಂಧಿಸಿದ ಸಿಸಿಬಿ ಪೊಲೀಸರಿಗೆ ಶುರುವಾಯ್ತು ಆತಂಕ..!
ಪಾದರಾಯನಪುರದಲ್ಲಿ ಘಟನೆ ನಡೆದ ದಿನವೇ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳನ್ನು ಕ್ವಾರಂಟೈನ್ಗೆ ಒಳಪಡಿಸುವ ಚಿಂತನೆ ನಡೆಸಲಾಗಿತ್ತು. ಆದರೆ ಆ ಬಳಿಕ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು ಎನ್ನಲಾಗಿದೆ.
ಬೆಂಗಳೂರು(ಏ.24): ಕೊರೋನಾ ವಾರಿಯರ್ಸ್ ವಿರುದ್ಧ ಗೂಂಡಾಗಿರಿ ತೋರಿದ್ದ ಪಾದರಾಯನಪುರ ಪುಂಡರನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದರು. ಆದರೆ ಈಗ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಆತಂಕ ಶುರುವಾಗಿದೆ.
ಪಾದರಾಯನಪುರದಲ್ಲಿ ಘಟನೆ ನಡೆದ ದಿನವೇ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳನ್ನು ಕ್ವಾರಂಟೈನ್ಗೆ ಒಳಪಡಿಸುವ ಚಿಂತನೆ ನಡೆಸಲಾಗಿತ್ತು. ಆದರೆ ಆ ಬಳಿಕ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು ಎನ್ನಲಾಗಿದೆ.
ಕೊರೋನಾ ಸೋಂಕಿತ ವೃದ್ದೆ ಸಾವು: ಶವ ಸಂಸ್ಕಾರಕ್ಕೆ ಸ್ಥಳೀಯರಿಂದ ವಿರೋಧ..!
ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸರು ಹಾಗೂ ಸಿಬ್ಬಂದಿಗಳನ್ನು ಕ್ವಾರಂಟೈನ್ಗೆ ಒಳಪಡಿಸಲು ಪೊಲೀಸ್ ಇಲಾಖೆ ಚಿಂತನೆ ನಡೆಸುತ್ತಿದೆ. ಪಾದರಾಯನಪುರ ಪುಂಡರಿಗೂ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ಪಾದರಾಯನಪುರ ಪೊಲೀಸರಿಗೆ ಆತಂಕ ಶುರುವಾಗಿದೆ.