ಬೆಳಗಾವಿ ಅಧಿವೇಶನ ಮುಗಿಯುತ್ತಿದ್ದಂತೆ ಬೆಂಗಳೂರಿಗೆ ಕಾದಿದೆಯೇ ಮತ್ತೊಂದು ಶಾಕ್?

ಬೆಲೆ ಏರಿಕೆ ಬಿಸಿಯಿಂದ ಕಂಗೆಟ್ಟಿರುವ ಬೆಂಗಳೂರಿಗರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ತಯಾರಿ ನಡೆಸುತ್ತಿದ್ದು, ಬೆಳಗಾವಿ ಅಧಿವೇಶನ ಮುಗಿಯುತ್ತಿದ್ದಂತೆ ಮತ್ತೊಮ್ಮೆ ಬೆಲೆ ಏರಿಕೆ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ.

Naveen Kodase  | Published: Dec 16, 2024, 5:12 PM IST

ಬೆಂಗಳೂರು: ಬೆಳಗಾವಿ ಅಧಿವೇಶನ ಮುಗಿಯುತ್ತಿದ್ದಂತೆ ಬೆಂಗಳೂರಿಗೆ ಕಾದಿದ್ಯಾ ಶಾಕ್ ಎನ್ನುವ ಆತಂಕ ಕಾಡಲಾರಂಭಿಸಿದೆ. ಈಗಾಗಲೇ ಹಾಲಿನ ಬೆಲೆ ಹೆಚ್ಚಳದಿಂದ ಕಂಗಾಲಾಗಿರುವ ಮಂದಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡುವ ತಯಾರಿಯಲ್ಲಿದೆ. 

ಹೌದು, ಕಾವೇರಿ ನೀರು ದರ ಹೆಚ್ಚಿಸಲು ಜಲಮಂಡಳಿ ಸಿದ್ಧತೆ ನಡೆಸಿದೆ. ವಿಧಾನ ಮಂಡಲ ಕಲಾಪ ಮುಗಿದ ಬಳಿಕ ರಾಜ್ಯ ಸರ್ಕಾರ ಕಾವೇರಿ ನೀರು ದರ ಪರಿಷ್ಕರಣೆ ಮಾಡಲು ಮುಂದಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
 

Read More...