
ಬೆಂಗಳೂರು ಮಳೆ: ಮನೆ ಕಳೆದುಕೊಂಡ ಪ್ರತಿ ಕುಟುಂಬಕ್ಕೂ 25 ಸಾವಿರ ರೂ ಪರಿಹಾರ
ಬೆಂಗಳೂರಿನಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬೆಂಗಳೂರು (ಅ. 24): ಬೆಂಗಳೂರಿನಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Add Asianetnews Kannada as a Preferred Source

ಮಳೆಗೆ ನಲುಗಿದ ಬೆಂಗಳೂರು : ಪರಿಸ್ಥಿತಿ ಅವಲೋಕಿಸುವಂತೆ ಬಿಬಿಎಂಪಿಗೆ ಸಿಎಂ ಸೂಚನೆ
'ಮಳೆಯಲ್ಲಿ ಮನೆಗಳನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೂ 25 ಸಾವಿರ ರೂ ಕೊಡಲು ತೀರ್ಮಾನಿಸಲಾಗಿದೆ. ಇವತ್ತು ನಾಳೆ ಮಳೆ ಬಿದ್ರೆ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಚರ್ಚಿಸಿದ್ದೇವೆ. ಶಾಶ್ವತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದ್ದೇನೆ. ಇನ್ನು ಸಂಪೂರ್ಣವಾಗಿ ಮನೆ ಕಳೆದುಕೊಂಡವರ ಜಾಗ ನೋಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.