Asianet Suvarna News Asianet Suvarna News

ಬೆಂಗಳೂರು ಗಲಭೆ: ಪುಂಡರ ಮನೆಗೆ ಭೇಟಿ ಕೊಟ್ಟ ಪೊಲೀಸರಿಗೆ ಶಾಕ್!

ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ಬೆಂಕಿ ಹಚ್ಚಿ ಗಲಭೆ ನಡೆಸಿದ್ದ ಪುಂಡರ ಬೆನ್ನತ್ತಿದ ಪೊಲೀಸ್ ಈಗಾಗಲೇ 350 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಹೀಗಿದ್ದರೂ ಅನೇಕ ಮಂದಿ ನಾಪತ್ತೆಯಾಗಿದ್ದು, ಅನೇಕ ಮನೆಗಳಿಗೆ ಬೀಗ ಬಿದ್ದಿದೆ. 

ಬೆಂಗಳೂರು(ಆ.22): ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ಬೆಂಕಿ ಹಚ್ಚಿ ಗಲಭೆ ನಡೆಸಿದ್ದ ಪುಂಡರ ಬೆನ್ನತ್ತಿದ ಪೊಲೀಸ್ ಈಗಾಗಲೇ 350 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಹೀಗಿದ್ದರೂ ಅನೇಕ ಮಂದಿ ನಾಪತ್ತೆಯಾಗಿದ್ದು, ಅನೇಕ ಮನೆಗಳಿಗೆ ಬೀಗ ಬಿದ್ದಿದೆ. 

ಹೌದು ಈಗಾಗಲೇ ಪೊಲೀಸರು 350 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರಾದರ, ಇನ್ನೂ 150ಕ್ಕೂ ಅದಿಕ ಮಂದಿಯನ್ನು ಪತ್ತೆ ಹಚ್ಚಬೇಕಿದೆ. ಆದರೆ ಇವರೆಲ್ಲರೂ ಬೆಂಗಳೂರನ್ನು ಬಿಟ್ಟು ಪರಾರಿಯಾಗಿದ್ದಾರೆನ್ನಲಾಗಿದೆ. ಇವರ ಹುಡುಕಾಟಕ್ಕಾಗಿ ಮನೆಗೆ ತೆರಳಿದ ಪೊಲೀಸರಿಗೆ ಶಾಕ್ ಕಾದಿತ್ತು. ಯಾಕೆಂದರೆ ನೂರಕ್ಕೂ ಅಧಿಕ ಮನೆಗಳಿಗೆ ಬೀಗ ಬಿದ್ದಿದ್ದು, ಗಲಭೆಕೋರರು ಸಿಗದೇ ಪೊಲೀಸರು ಮರಳಿದ್ದಾರೆ. 

ಗಲಭೆಕೋರರುಉ ಅನ್ಯ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರ ಪ್ರದೇಶಕ್ಕೆ ಪರಾರಿಯಾಗಿದ್ದಾರೆ. ಹೀಗಿದ್ದರೂ ಪೊಲೀಸರು ಪುಂಡರ ಹರೆಡೆಮುರಿ ಕಟ್ಟಲು ಸಿದ್ಧವಾಗಿದ್ದು, 

Video Top Stories