Asianet Suvarna News Asianet Suvarna News

ಭಾರತ್ ಬಂದ್ : ಮೆಜೆಸ್ಟಿಕ್‌ನಲ್ಲಿ ಬಂದ್ ಬಿಸಿ ಹೇಗಿದೆ? ನೋಡೋಣ ಬನ್ನಿ!

ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲೂ ರೈತರು ಬೆಂಬಲ ನೀಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಬೆಂಗಳೂರು (ಡಿ. 08): ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲೂ ರೈತರು ಬೆಂಬಲ ನೀಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಭಾರತ್ ಬಂದ್ : ಸಿಎಂ ಮನೆಗೆ ಮುತ್ತಿಗೆ , ಪ್ರತಿಭಟನೆಯ ಕಾವು ಹೆಚ್ಚಿಸಲು ರೈತ ಸಂಘಟನೆಗಳ ನಿರ್ಧಾರ

ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ಎನ್ನಬಹುದು. ಕೆ ಆರ್‌ ಮಾರುಕಟ್ಟೆಗೆ ಬಂದ್ ಬಿಸಿ ತಟ್ಟಿಲ್ಲ. ವ್ಯಾಪಾರ, ವಹಿವಾಟು ಎಂದಿನಂತಿದೆ. ಮೆಜೆಸ್ಟಿಕ್‌ನ ಚಿತ್ರಣ ನೋಡುವುದಾದರೆ, ಅಲ್ಲಿಯೂ ಕೂಡಾ ಬಂದ್ ಬಿಸಿ ಅಷ್ಟಾಗಿ ಕಾಣಿಸುತ್ತಿರಲಿಲ್ಲ. ಬಸ್ ಸಂಚಾರ ಎಂದಿನಂತಿದೆ. ಪ್ರಯಾಣಿಕರು ತಮ್ಮ ಪಾಡಿಗೆ ತಾವು ಬ್ಯುಸಿಯಾಗಿದ್ದರು. ವ್ಯಾಪಾರ, ವಹಿವಾಟು ಎಂದಿನಂತೆ ಇತ್ತು. ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ಕೊಟ್ಟಿದ್ಧಾರೆ. ನೋಡೋಣ ಬನ್ನಿ..!