
ಭಾರತ್ ಬಂದ್ : ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ ಎಂದ ಸಿದ್ದರಾಮಯ್ಯ
ರೈತರ ಈ ಹೋರಾಟ ಕಾಂಗ್ರೆಸ್ ಪ್ರೇರಿತವಲ್ಲ. ರೈತರಿಗೆ ಮಾರಕವಾದ ಕಾಯ್ದೆಯನ್ನು ಜಾರಿ ತಂದಿದ್ದಾರೆ. ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ : ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು (ಸೆ. 27): ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಇಂದು ಭಾರತ್ ಬಂದ್ಗೆ ಕರೆ ನೀಡಿವೆ. ರೈತರ ಈ ಹೋರಾಟ ಕಾಂಗ್ರೆಸ್ ಪ್ರೇರಿತವಲ್ಲ. ರೈತರಿಗೆ ಮಾರಕವಾದ ಕಾಯ್ದೆಯನ್ನು ಜಾರಿ ತಂದಿದ್ದಾರೆ. ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಭಾರತ್ ಬಂದ್ : ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ
ರೈತ ಸಂಘಟನೆಗಳು ಬಂದ್ ಯಶಗೊಳಿಸಲು ಮೈಸೂರು, ಚಾಮರಾಜನಗರ, ಶಿವಮೊಗ್ಗ, ದೊಡ್ಡಬಳ್ಳಾಪುರ, ಮಾಗಡಿ ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡಲು ನಿರ್ಧರಿಸಿವೆ. ರಾಷ್ಟ್ರೀಯ ಹೆದ್ದಾರಿಗಳಾದ ಬೆಂಗಳೂರು-ಗೋವಾ, ಬೆಂಗಳೂರು-ಹೈದರಾಬಾದ್, ಬೆಂಗಳೂರು-ಚೆನ್ನೈ ರಸ್ತೆಗಳಲ್ಲೂ ತಡೆ ಮಾಡಲು ಮುಂದಾಗಿವೆ.