Asianet Suvarna News Asianet Suvarna News

ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್‌ ಕಾಯ್ದೆ ಚರ್ಚೆ..?

ಮುಂದಿನ ಅಧಿವೇಶನದಲ್ಲಿ ಲವ್‌ಜಿಹಾದ್‌ ಕಾಯ್ದೆ ಜಾರಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜ. 03): ಮುಂದಿನ ಅಧಿವೇಶನದಲ್ಲಿ ಲವ್‌ಜಿಹಾದ್‌ ಕಾಯ್ದೆ ಜಾರಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಕಳೆದ ಕಾರ್ಯಕಾರಿ ಸಭೆಯಲ್ಲಿ ಗೋಹತ್ಯೆ ನಿಷೇಧ ಮತ್ತು ಲವ್‌ಜಿಹಾದ್‌ ಕಾಯ್ದೆ ಕುರಿತು ಚರ್ಚೆ ನಡೆದಿತ್ತು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಮುಂದಿನ ಅಧಿವೇಶನದಲ್ಲಿ ಲವ್‌ಜಿಹಾದ್‌ ಕಾಯ್ದೆ ಕೂಡಾ ಜಾರಿಗೆ ಬರಲಿದೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. 

ಗೋ ಹತ್ಯೆ ನಿಷೇಧ ಕಾಯ್ದೆ ಹಿನ್ನಲೆ; ಸರ್ಕಾರಕ್ಕೆ ವಿಶೇಷ ಮನವಿ ಮಾಡಿದ ರೈತರು!