ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ: ಕೇಸರಿ ಪಾಳಯದಲ್ಲಿ ಗುಸು ಗುಸು!

ಕೋವಿಡ್‌ ನಿರ್ವಹಣೆ ಹೊಣೆ ಹಿರಿಯ ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಆದರೀಗ ಸಿಎಂ ಈ ನಿರ್ಧಾರದ ಹಿಂದೆ ಕೆಲ ಪಟ್ಟಭದ್ರ ಹಿತಾಸಕ್ತಿ ಕೆಲಸವಿದೆ ಎಂಬ ಗುಸು ಗುಸು  ಮಾತುಗಳು ಕೇಸರಿ ಪಾಳಯದಲ್ಲೇ ಕೇಳಿ ಬಂದಿವೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.06)ಕೋವಿಡ್‌ ನಿರ್ವಹಣೆ ಹೊಣೆ ಹಿರಿಯ ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಆದರೀಗ ಸಿಎಂ ಈ ನಿರ್ಧಾರದ ಹಿಂದೆ ಕೆಲ ಪಟ್ಟಭದ್ರ ಹಿತಾಸಕ್ತಿ ಕೆಲಸವಿದೆ ಎಂಬ ಗುಸು ಗುಸು ಮಾತುಗಳು ಕೇಸರಿ ಪಾಳಯದಲ್ಲೇ ಕೇಳಿ ಬಂದಿವೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಎರಡು ತಿಂಗಳ ಹಿಂದೆಯೇ ಸಲಹಾ ಸಮಿತಿ ವರದಿ ನೀಡಿತ್ತು. ಈ ವರದಿಯಂತೆ ಕ್ರಮ ಕೈಗೊಳ್ಳಿ ಎಂದು ಆರೋಗ್ಯ ಸಚಿವ ಸುಧಾಕರ್ ಸಿಎಂಗೆ ಮನವಿ ಮಾಡಿದ್ದರು ಎನ್ನಲಾಗಿದೆ.

ನನ್ನ ಹೆಂಡತಿಗೂ ವೆಂಟಿಲೇಟರ್‌ ಸಿಕ್ಕಿಲ್ಲ, ಸೋತಿದ್ದೇನೆ: ಅಸಹಾಯಕತೆ ತೋಡಿಕೊಂಡ DHO!

ಆದರೆ ಈ ಕಠಿಣ ಕ್ರಮಕ್ಕೆ ಕೆಲ ಹಿರಿಯ ಸಚಿವರು ವಿರೋಧಿಸಿದ್ದರೆನ್ನಲಾಗಿದೆ. ಈ ವೇಳೆ ತಜ್ಞರು ಸಚಿವರ ನಡೆಗೆ ವಿಷಾದ ವ್ಯಕ್ತಪಡಿಸಿದ್ದರೆನ್ನಲಾಗಿದೆ. 

ಹೀಗಿರುವಾಗ ತಜ್ಞರ ಸಲಹೆಯಂತೆ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಆದರೀಗ ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲಿ ಸದ್ದು ಮಾಡಿವೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video