Asianet Suvarna News Asianet Suvarna News

ಮತ್ತೊಂದು ಎಡವಟ್ಟು ಮಾಡಿಕೊಂಡು ಚರ್ಚೆಗೆ ಗ್ರಾಸವಾದ ರೇಣುಕಾಚಾರ್ಯ..!

ರಾಜ್ಯ ಸರ್ಕಾರ ಮೌಢ್ಯ ನಿಷೇಧ ಕಾಯಿದೆ ಜಾರಿ ತಂದಿದೆ. ಆದ್ರೆ, ಇದು ಲೆಕ್ಕಕ್ಕೆ ಇಲ್ವಂತೆ ಬಿಜೆಪಿ ಶಾಸಕ ರೇಣುಕಾಚಾರ್ಯ ಮಾತ್ರ ಮಹಿಳೆಯನ್ನು ಸಿಡಿ ಕಂಬಕ್ಕೆ ಕಟ್ಟಿ ತಿರುಗಿಸುವ ಈ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ.

ದಾವಣಗೆರೆ, [ಜ.28]: ರಾಜ್ಯ ಸರ್ಕಾರ ಮೌಢ್ಯ ನಿಷೇಧ ಕಾಯಿದೆ ಜಾರಿ ತಂದಿದೆ. ಆದ್ರೆ, ಇದು ಲೆಕ್ಕಕ್ಕೆ ಇಲ್ವಂತೆ ಬಿಜೆಪಿ ಶಾಸಕ ರೇಣುಕಾಚಾರ್ಯ ಮಾತ್ರ ಮಹಿಳೆಯನ್ನು ಸಿಡಿ ಕಂಬಕ್ಕೆ ಕಟ್ಟಿ ತಿರುಗಿಸುವ ಈ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ.

ಮೌಢ್ಯ ನಿಷೇಧ ಕಾಯ್ದೆಗೆ ರಾಜ್ಯ ಸಂಪುಟ ಸಭೆ ಅನುಮೋದನೆ

ದಾವಣಗೆರೆ ತಾಲೂಕಿನ ಕೆಂಚಿಕೊಪ್ಪ ಗ್ರಾಮದ ಶ್ರೀ ಮಾಯಮ್ಮ, ಶ್ರೀ ಮರಿಯಮ್ಮ ದೇವಿಯರ ಜೋಡಿ ಸಿಡಿ ಉತ್ಸವ ಮಂಗಳವಾರ ಸಂಜೆ ಶಾಸಕ ಎಂ.ಪಿ. ರೇಣುಕಾಚಾರ್ಯ ಚಾಲನೆ ನೀಡಿದ್ದು, ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

Video Top Stories