
Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ
'ಬ್ರಾಹ್ಮಣ ಸಿಎಂ' ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೌನ ಮುರಿದಿದ್ದು, ನಾನು ರಾಜ್ಯ ರಾಜಕಾರಣದತ್ತ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ
ನಾನು ರಾಜ್ಯ ರಾಜಕಾರಣದತ್ತ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉಧ್ಭವಿಸಲ್ಲ, ಇಂತಹ ಅಪ್ರಬುದ್ಧ ಹೇಳಿಕೆಗಳಿಗೆ ನಾನು ಉತ್ತರಿಸಲ್ಲ ಎಂದು ಅವರು ತಿಳಿಸಿದ್ದಾರೆ. ಮೋದಿ ಕೈ ಕೆಳಗೆ ಕೆಲಸ ಮಾಡಲು ಅತ್ಯಂತ ಖುಷಿಯಿದೆ, ಮೋದಿಯಂತಹ ನಾಯಕರು ಶತಮಾನಕ್ಕೊಬ್ಬರು. ಇಡೀ ವಿಶ್ವವೇ ಮೋದಿಯನ್ನು ನಿಬ್ಬೆರಗಾಗಿ ನೋಡ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಪೇಶ್ವೆ ಬ್ರಾಹ್ಮಣ ಸಿಎಂ ಆಗ್ತಾರೆ ಎಂದಿದ್ದ ಎಚ್.ಡಿ.ಕೆಗೆ ತಿರುಗೇಟು ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ