
ಮಳೆ ಹಾನಿ: ನಾಳೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ: ಸಿಎಂ ಭರವಸೆ
ಬೆಳೆ ಹಾನಿಯ ಬಗ್ಗೆ ನಾಳೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಮಾಲೋಚನೆ ಮಾಡುತ್ತೇನೆ. ಬೆಳೆ ಹಾನಿಗೆ ಹಣವನ್ನೂ ಬಿಡುಗಡೆ ಮಾಡುತ್ತೇನೆ. ಆಯಾ ಜಿಲ್ಲೆಗಳ ಹಾನಿಗಳ ಬಗ್ಗೆ ಜಿಲ್ಲಾ ಉಸ್ತುವಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಸಿಎಂ ಭರವಸೆ ನೀಡಿದ್ಧಾರೆ.
ಬೆಂಗಳೂರು (ಅ. 15): ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಗದ್ದೆಗಳಿಗೆ ನೀರು ನುಗ್ಗಿದ್ದರಿಂದ ಬೆಳೆಗಳು ನಾಶವಾಗಿ ರೈತನ ಬದುಕು ಸಂಕಷ್ಟದಲ್ಲಿದೆ. ನೆರೆ ಪರಿಹಾರದತ್ತ ಗಮನ ವಹಿಸಿದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕಲ್ಬುರ್ಗಿಯಲ್ಲಿಯೂ ಕೂಡಾ ಪ್ರವಾಹದಿಂದ ರೈತರು ಕಷ್ಟಪಡುತ್ತಿದ್ದಾರೆ. ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಲ್ಲಿ ಎಂದು ಪ್ರಶ್ನಿಸುತ್ತಿದ್ದಾರೆ.
Add Asianetnews Kannada as a Preferred Source

ನಾಳೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಮಾಲೋಚನೆ ಮಾಡುತ್ತೇನೆ. ಬೆಳೆ ಹಾನಿಗೆ ಹಣವನ್ನೂ ಬಿಡುಗಡೆ ಮಾಡುತ್ತೇನೆ. ಆಯಾ ಜಿಲ್ಲೆಗಳ ಹಾನಿಗಳ ಬಗ್ಗೆ ಜಿಲ್ಲಾ ಉಸ್ತುವಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಸಿಎಂ ಭರವಸೆ ನೀಡಿದ್ಧಾರೆ.