ಅನ್ಲಾಕ್ ಸುಳಿವು ನೀಡಿದ ಸಿಎಂ ಯಡಿಯೂರಪ್ಪ, ಷರತ್ತುಗಳು ಅನ್ವಯ!
'ಪಾಸಿಟಿವಿಟಿ ದರ ಶೇ. 5 ಕ್ಕೆ ತಗ್ಗಿದರೆ ಅನ್ಲಾಕ್ ಮಾಡುತ್ತೇವೆ. ಲಾಕ್ಡೌನ್ ಸಡಿಲಿಕೆ ಬಗ್ಗೆ ಅಧಿಕಾರಿಗಳು, ಸಚಿವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು (ಜೂ. 05): 'ಪಾಸಿಟಿವಿಟಿ ದರ ಶೇ. 5 ಕ್ಕೆ ತಗ್ಗಿದರೆ ಅನ್ಲಾಕ್ ಮಾಡುತ್ತೇವೆ. ಲಾಕ್ಡೌನ್ ಸಡಿಲಿಕೆ ಬಗ್ಗೆ ಅಧಿಕಾರಿಗಳು, ಸಚಿವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಮಾಧಾನಕರ ವಿಚಾರವೆಂದರೆ ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಹಾಗಾಗಿ ಅನ್ಲಾಕ್ ಆಗುವ ಸಾಧ್ಯತೆ ದಟ್ಟವಾಗಿದೆ.