ಆದೇಶ ಉಲ್ಲಂಘಿಸಿ ಜಾತ್ರೆ: ದೇವಸ್ಥಾನದ ವಿರುದ್ಧ ಪ್ರಕರಣ ದಾಖಲು
ಸರ್ಕಾರದ ಆದೇಶ ಉಲ್ಲಂಘಿಸಿ ದೇವಸ್ಥಾನ ಜಾತ್ರೋತ್ಸವ ನಡೆಸಿದ ಹಿನ್ನಲೆಯಲ್ಲಿ ಉಳ್ಳಾಲದ ಸೋಮೇಶ್ವರ ಸೋಮನಾಥ ದೇವಸ್ಥಾನದ ಆಡಳಿತ ಮಂಡಳಿ ವಿರುದ್ದ ಪ್ರಕರಣ ದಾಖಲಾಗಿದೆ.
ಬೆಂಗಳೂರು (ಏ. 20): ಸರ್ಕಾರದ ಆದೇಶ ಉಲ್ಲಂಘಿಸಿ ದೇವಸ್ಥಾನ ಜಾತ್ರೋತ್ಸವ ನಡೆಸಿದ ಹಿನ್ನಲೆಯಲ್ಲಿ ಉಳ್ಳಾಲದ ಸೋಮೇಶ್ವರ ಸೋಮನಾಥ ದೇವಸ್ಥಾನದ ಆಡಳಿತ ಮಂಡಳಿ ವಿರುದ್ದ ಪ್ರಕರಣ ದಾಖಲಾಗಿದೆ.
ಆಕ್ಸಿಜನ್ ಪೈಪ್ ಕನೆಕ್ಟ್ ಆಗಿದೆ, ಲಿಕ್ವಿಡ್ಡೇ ಬರ್ತಿಲ್ಲ; ವಿಕ್ಟೋರಿಯಾ ದುಸ್ಥಿತಿ ಇದು!
ಸೋಮನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ. ಹೀಗಾಗಿ ನಿನ್ನೆ ದೇವಸ್ಥಾನಕ್ಕೆ ನೂತನ ರಥ ಮತ್ತು ಹೊರೆ ಕಾಣಿಕೆ ಮೆರವಣಿಗೆ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸಾವಿರಾರು ಜನರು ಭಾಗಿಯಾಗಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸದಸ್ಯರ ವಿರುದ್ದ ಪ್ರಕರಣ ದಾಖಲಾಗಿದೆ.