ಕಾವೇರಿ ವಿವಾದ ಡಿಕೆ ಶಿವಕುಮಾರ್ ಹೆಗಲಿಗಿಟ್ಟು ಸೈಲೆಂಟ್ ಆದ ಸಿದ್ದರಾಮಯ್ಯ!

ಕಾವೇರಿ ವಿವಾದಲ್ಲೂ ಪ್ರಜ್ವಲಿಸಿದ ಡಿಕೆ ಶಿವಕುಮಾರ್-ಸಿದ್ದರಾಮಯ್ಯ ಬಣರಾಜಕೀಯ, ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಕಾಂಗ್ರೆಸ್ ಆಪರೇಶನ್ ಚುರುಕು, ಸಿದ್ದರಾಮಯ್ಯ ಜಾತ್ಯಾತೀತ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು, ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಮೊದಲ ಜಂಟಿ ಪ್ರತಿಭಟನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ಇಲ್ಲಿವೆ.
 

First Published Sep 27, 2023, 10:54 PM IST | Last Updated Sep 27, 2023, 10:54 PM IST

ಕಾವೇರಿ ವಿವಾದದಲ್ಲಿ ಸಿಎಂ ಸಿದ್ದರಾಮಯ್ಯ ಹೆಚ್ಚು ತೊಡಗಿಸಿಕೊಳ್ಳುತ್ತಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಹೇಳಿಕೆಗಳು ವಿರುದ್ಧವಾಗಿದೆ. ಕಾವೇರಿ ವಿವಾದವನ್ನು ಡಿಕೆಶಿ ಹೆಗಲಿಗಿಟ್ಟು ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿದೆ. ಈ ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯ ಕಾವೇರಿ ವಿಚಾರದಲ್ಲಿ ಮುತುವರ್ಜಿ ವಹಿಸಿದ್ದರು. ಆದರೆ ಈ ಬಾರಿ ಎಲ್ಲವನ್ನು ಡಿಕೆ ಶಿವಕುಮಾರ್ ಮೇಲೆ ಬಿಟ್ಟಿದ್ದಾರೆ. ಈಗಾಗಲೇ ಬೆಂಗಳೂರು ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿದೆ. ಇದೀಗ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಸೆ.29 ರಿಂದ ಬೆಳಗ್ಗೆ 6 ರಿಂದ ರಾತ್ರಿ 6 ಗಂಟೆ ವರೆಗೆ ಬಂದ್ ನಡಯಲಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.