
Tumakuru Bus Accident: ಬಸ್ ಅಪಘಾತಕ್ಕೂ ಮುನ್ನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಪಳವಳ್ಳಿ ಕಟ್ಟೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಘಾತಕ್ಕೂ ಮೊದಲಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯ ಏಷ್ಯಾನೆಟ್ ಸುವರ್ಣ ನ್ಯೂಸ್ಗೆ ಲಭ್ಯವಾಗಿದೆ.
ತುಮಕೂರು (ಮಾ, 20): ಪಳವಳ್ಳಿ ಕಟ್ಟೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಘಾತಕ್ಕೂ ಮೊದಲಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯ ಏಷ್ಯಾನೆಟ್ ಸುವರ್ಣ ನ್ಯೂಸ್ಗೆ ಲಭ್ಯವಾಗಿದೆ. ಈ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
Add Asianetnews Kannada as a Preferred Source

ಜಿಲ್ಲೆಯ ಸೂಲನಾಯಕನಹಳ್ಳಿಯ ಅಮೂಲ್ಯ(16), ಅಜಿತ್ (18), ಬೆಸ್ತರಹಳ್ಳಿಯ ಶಹನವಾಜ್ (18), ವೈ.ಎನ್.ಹೊಸಕೋಟೆಯ ಕಲ್ಯಾಣ್(18), ದಾದುವಲ್ಲಿ(26), ಹೃಷಿಕಾ(21) ಮೃತರು. ಘಟನೆಗೆ ಸಂಬಂಧಿಸಿ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.