ಚಾಮರಾಜನಗರ: 'ಕೋಟಿ' ಒಡೆಯ ಮಾದಪ್ಪ, 2.57 ಕೋಟಿ ರೂ ಹುಂಡಿ ಸಂಗ್ರಹ

ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ (Male Maadeshwara Betta) ಹುಂಡಿ ಎಣಿಕೆ ಕಾರ್ಯ ನಡೆದಿದ್ದು ಬರೋಬ್ಬರಿ ಎರಡೂವರೆ ಕೋಟಿ ರು. ಸಂಗ್ರಹವಾಗಿದೆ. 

Share this Video
  • FB
  • Linkdin
  • Whatsapp

ಚಾಮರಾಜನಗರ (ಮೇ. 15): ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ (Male Maadeshwara Betta) ಹುಂಡಿ ಎಣಿಕೆ ಕಾರ್ಯ ನಡೆದಿದ್ದು ಬರೋಬ್ಬರಿ ಎರಡೂವರೆ ಕೋಟಿ ರು. ಸಂಗ್ರಹವಾಗಿದೆ. 

ಕೇವಲ 34 ದಿನಗಳಲ್ಲಿ 2,57,25,859 ನಗದು ಸಂಗ್ರಹವಾಗಿದೆ. ಇದರೊಟ್ಟಿಗೆ, 127 ಗ್ರಾಂ ಚಿನ್ನ, 3,447 ಗ್ರಾಂ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಭಕ್ತರು ಮಹದೇಶ್ವರನಿಗೆ ಅರ್ಪಿಸಿದ್ದಾರೆ. ದಿನನಿತ್ಯದ ವಿವಿಧ ಸೇವಗಳನ್ನು ಹೊರತುಪಡಿಸಿ ಹುಂಡಿಯಲ್ಲೇ ಎರಡುವರೆ ಕೋಟಿ ಆದಾಯ ಬಂದಿದ್ದು ಕೊರೋನಾ ಬಳಿಕ ಭಕ್ತಸಾಗರವೇ ಬೆಟ್ಟಕ್ಕೆ ಹರಿದುಬರುತ್ತಿದೆ. ವಾರಾಂತ್ಯ ಹಾಗೂ ಸೋಮವಾರದಂದು ಚಿನ್ನದ ರಥ ಸೇವೆ ಮಾಡಲು ಕಿಕ್ಕಿರಿದು ಸೇರುತ್ತಿದ್ದಾರೆ.

Related Video