
ಸಿದ್ದರಾಮಯ್ಯ ಕಾಲದಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ: ವಿಚಾರಣೆ ವೇಳೆ ಹೊರಬಿತ್ತು ಸ್ಪೋಟಕ ಮಾಹಿತಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣವನ್ನು ಬಗೆದಷ್ಟು ಹೊರ ಬರ್ತಿದೆ.
ಬೆಂಗಳೂರು, (ಸೆಪ್ಟೆಂಬರ್.19): ಮಾಜಿ ಸಿಎಂ ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತಷ್ಟು ತನಿಖೆ ಕೈಗೊಂಡಿದ್ದಾರೆ. ಎಡಿಜಿಪಿ ಶರತ್ ಚಂದ್ರ ನೇತೃತ್ವದ ತಂಡದಿಂದ ತನಿಖೆ ನಡೆಯುತ್ತಿದ್ದು, ಶಿಕ್ಷಣ ಇಲಾಖೆಯಲ್ಲಿ ಹಳೆ ನೇಮಕಾತಿ ಕಡತಗಳನ್ನ ಕಲೆ ಹಾಕುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
3 ಅಲ್ಲ, ಎಲ್ಲ ಜಿಲ್ಲೆಗಳಲ್ಲೂ ಶಿಕ್ಷಕರ ನೇಮಕ ಅಕ್ರಮ: ಹಾಲಿ, ಮಾಜಿ ಅಧಿಕಾರಿಗಳಿಗೆ ಬಂಧನ ಭೀತಿ..!
ಶಿಕ್ಷಕರ ನೇಮಕಾತಿ ಅಧಿಸೂಚನೆ, ಸೆಲೆಕ್ಷನ್ ಲಿಸ್ಟ್, ಅಭ್ಯರ್ಥಿಗಳು ಪಡೆದ ಅಂಕಗಳು, ಮೆರಿಟ್ ಲಿಸ್ಟ್, ಇಲಾಖೆ ನಿಗದಿಪಡಿಸಿದ ಅಂಕಗಳ ವಿವರಗಳನ್ನು ಸಂಗ್ರಹ ಮಾಡಿದೆ. ಇನ್ನು ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಹೊರಬಿದ್ದಿದೆ.