
Haveri: ನವೀನ್ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ, ಪೋಷಕರಿಗೆ ಸಾಂತ್ವನ
ಸಿಎಂ ಬೊಮ್ಮಾಯಿ ನವೀನ್ ನಿವಾಸ ಚಳಗೇರಿಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ನವೀನ್ ಪೋಷಕರಿಗೆ ಸಾಂತ್ವನ ಹೇಳಿದರು.
ಬೆಂಗಳೂರು (ಮಾ. 21): ಸಿಎಂ ಬೊಮ್ಮಾಯಿ ನವೀನ್ ನಿವಾಸ ಚಳಗೇರಿಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ನವೀನ್ ಪೋಷಕರಿಗೆ ಸಾಂತ್ವನ ಹೇಳಿದರು.
Add Asianetnews Kannada as a Preferred Source

ಸಿರಿಗೆರೆ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ, ಸ್ಥಳೀಯ ಶಾಸಕ ಅರುಣಕುಮಾರ ಪೂಜಾರ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಉಕ್ರೇನ್ನಿಂದ ಹಿಂದಿರುಗಿರುವ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ನವೀನ್ ಸ್ನೇಹಿತರು ಆಗಮಿಸುತ್ತಿದ್ದಾರೆ. ಸುಮಾರು 3 ಗಂಟೆಗಳ ಕಾಲ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ.