
ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ: ಸಿಎಂ ಬೊಮ್ಮಾಯಿ
* ಐಟಿ ದಾಳಿ ಬಗ್ಗೆ ಸಿಎಂ ಬೊಮ್ಮಾಯಿ ಮೊದಲ ಬಾರಿಗೆ ಪ್ರತಿಕ್ರಿಯೆ
* ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ
* ಯಡಿಯೂರಪ್ಪನವರ ಆಪ್ತ ಉಮೇಶ್ ಮನೆ, ಕಚೇರಿಗಳ ಮೇಲೆ ಐಟಿ ದಾಳಿ
ಮೈಸೂರು(ಅ.07): ಐಟಿ ದಾಳಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ, ಮಾಹಿತಿ ಪಡೆದ ಮೇಲೆ ಮಾತನಾಡುತ್ತೇನೆ ಅಂತ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 50 ಕ್ಕೂ ಹೆಚ್ಚು ಕಡೆ ಹಾಗೂ ಬಾಗಲಕೋಟೆಯಲ್ಲೂ ಇಂದು ಬೆಳ್ಳಂಬೆಳಿಗ್ಗೆ ಐಟಿ ದಾಳಿ ನಡೆಸಲಾಗಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಆಪ್ತ ಉಮೇಶ್ ಅವರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ ಮಾಡಲಾಗಿದೆ.
Add Asianetnews Kannada as a Preferred Source
