Asianet Suvarna News Asianet Suvarna News

ಸಿಎಂ ನೇತೃತ್ವದಲ್ಲಿ ಕೋವಿಡ್ ಕುರಿತು ಮಹತ್ವದ ಸಭೆ, ಮತ್ತಷ್ಟು ಕಠಿಣ ನಿಯಮ ಚರ್ಚೆ

ಕೋವಿಡ್ 3 ನೇ ಅಲೆ ಭೀತಿ ಹಿನ್ನಲೆ ಬಿಗಿ ಕ್ರಮ ಕೈಗೊಳ್ಳುವ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. 
 

ಬೆಂಗಳೂರು (ಆ. 13): ಕೋವಿಡ್ 3 ನೇ ಅಲೆ ಭೀತಿ ಹಿನ್ನಲೆ ಬಿಗಿ ಕ್ರಮ ಕೈಗೊಳ್ಳುವ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ.

 ಆ. 23 ರಿಂದ ಶಾಲೆ ಆರಂಭ: ಗಡಿಭಾಗದ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳು ಹೀಗಿವೆ

ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆಯಲಿದ್ದು, ಆರೋಗ್ಯ ಸಚಿವ ಸುಧಾಕರ್, ಕಂದಾಯ ಸಚಿವ ಆರ್ ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ವಾರಾಂತ್ಯದ ಕರ್ಫ್ಯೂ ಸೇರಿ ಮತ್ತಿತರ ಕಠಿಣ ನಿಯಮಗಳನ್ನು ಜಾರಿಗೊಳಿಸುವ ನಿರೀಕ್ಷೆಯಿದೆ. 

Video Top Stories