ಕ್ಯಾಬಿನೆಟ್ ವಿಸ್ತರಣೆ: ರಾಜಭವನಕ್ಕೆ ಭೇಟಿ ನೀಡಿದ ಸಿಎಂ ಬಿಎಸ್ವೈ
ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಶುರುವಾಗಿದ್ದು, ಆಕಾಂಕ್ಷಿಗಳ ಪಟ್ಟಿಯೂ ಹೆಚ್ಚಾಗುತ್ತಿದೆ.
ಬೆಂಗಳೂರು(ಜು.31): ಸಚಿವ ಸಂಪುಟ ವಿಸ್ತರಣೆಯ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು(ಜು.31) ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಬಾಯಿ ವಾಲಾ ಜತೆ ಚರ್ಚೆ ನಡೆಸಿದ್ದಾರೆ. ಸದ್ಯದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ.
ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಶುರುವಾಗಿದ್ದು, ಆಕಾಂಕ್ಷಿಗಳ ಪಟ್ಟಿಯೂ ಹೆಚ್ಚಾಗುತ್ತಿದೆ.
ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ: ಬಿಎಸ್ವೈ ಸರ್ಕಾರದ ವಿರುದ್ಧ ಹೆಚ್ಡಿಕೆ ಗರಂ
ಹೊಸದಾಗಿ ವಿಧಾನಪರಿಷತ್ಗೆ ಆಯ್ಕೆಯಾದ ಎಂಟಿಬಿ ನಾಗರಾಜ್, ಸಿ.ಪಿ. ಯೋಗೇಶ್ವರ್. ಎಚ್. ವಿಶ್ವನಾಥ್ ಪ್ರಮುಖ ಸಚಿವಾಕಾಂಕ್ಷಿಗಳಾಗಿದ್ದಾರೆ. ಆಗಸ್ಟ್ ತಿಂಗಳ ಮೊದಲ ಇಲ್ಲವೇ ಎರಡನೇ ವಾರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.