Asianet Suvarna News Asianet Suvarna News

ನಾಳೆ ಎಲ್ಲಾ ಡೀಸಿಗಳ ಜೊತೆ ಸಿಎಂ ಬಿಎಸ್‌ವೈ ಸಭೆ, ಅನ್‌ಲಾಕ್‌ ಭವಿಷ್ಯ ನಿರ್ಧಾರ

ರಾಜ್ಯದಲ್ಲಿ ಅನ್‌ಲಾಕ್‌ ಮಾಡುವ ಕುರಿತು ಗುರುವಾರ ಸಿಎಂ ಸರಣಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಕೊರೋನಾ ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಸಚಿವರ ಜತೆ ಪ್ರತ್ಯೇಕವಾಗಿ ಎರಡು ಮಹತ್ವದ ಸಭೆ ನಡೆಸಲಿದ್ದಾರೆ.
 

ಬೆಂಗಳೂರು (ಜೂ. 09):  ರಾಜ್ಯದಲ್ಲಿ ಅನ್‌ಲಾಕ್‌ ಮಾಡುವ ಕುರಿತು ಗುರುವಾರ ಸಿಎಂ ಸರಣಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಕೊರೋನಾ ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಸಚಿವರ ಜತೆ ಪ್ರತ್ಯೇಕವಾಗಿ ಎರಡು ಮಹತ್ವದ ಸಭೆ ನಡೆಸಲಿದ್ದಾರೆ.

ನಾಯಕತ್ವ ಬದಲಾವಣೆ: ಹೈಕಮಾಂಡ್‌ನಿಂದ ಬಂತು ಖಡಕ್ ಸಂದೇಶ

 ಕೋವಿಡ್‌ ಸೋಂಕು ಹೆಚ್ಚಿರುವ ಜಿಲ್ಲೆಯ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸದ್ಯದ ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಲಿದ್ದಾರೆ. ವಿಡಿಯೋ ಸಂವಾದ ಮೂಲಕ ಸಭೆ ನಡೆಸಿ ಮಾಹಿತಿ ಪಡೆದುಕೊಂಡ ಬಳಿಕ ಸಂಜೆ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ.

 

Video Top Stories