
ಕೃಷ್ಣ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹ ತಡೆಯಲು ಶಾಶ್ವತ ಕ್ರಮಕ್ಕೆ ಮುಂದಾದ ಸರ್ಕಾರ
* ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ ಪಾಟೀಲ್ ಜೊತೆ ಯಡಿಯೂರಪ್ಪ ಸಭೆ
* ಪ್ರತಿ ವರ್ಷ ಮಳೆಯಿಂದಾಗಿ ಕೃಷ್ಣ ನದಿ ಪಾತ್ರದಲ್ಲಿ ಪ್ರವಾಹ
* ಕೃಷ್ಣ ಕಣಿವೆಯಿಂದ ನೀರು ಬಿಡದಂತೆ ಮಹಾರಾಷ್ಟ್ರಕ್ಕೆ ಸಿಎಂ ಮನವಿ
ಬೆಂಗಳೂರು(ಜೂ.19): ಮುಂಗಾರು ಮಳೆಯಿಂದ ಕೃಷ್ಣ ಕಣಿವೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹ ತಡೆಯಲು ಶಾಸ್ವತ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೌದು, ಇಂದು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ ಪಾಟೀಲ್ ಜೊತೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಿದ್ದಾರೆ. ಪ್ರತಿ ವರ್ಷ ಮಳೆಯಿಂದಾಗಿ ಕೃಷ್ಣ ನದಿ ಪಾತ್ರದಲ್ಲಿ ಪ್ರವಾಹ ಎದುರಾಗುತ್ತದೆ. ಹೀಗಾಗಿ ಕೃಷ್ಣ ಕಣಿವೆಯಿಂದ ನೀರು ಬಿಡದಂತೆ ಮಹಾರಾಷ್ಟ್ರಕ್ಕೆ ಸಿಎಂ ಮನವಿ ಮಾಡಿಕೊಂಡಿದ್ದಾರೆ.
Add Asianetnews Kannada as a Preferred Source

ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ