ಸಿಎಂ ಬಿಎಸ್ವೈ ಡಿಸ್ಚಾರ್ಜ್, ಮೂರು ದಿನದ ಬಳಿಕ ಮಳೆ ಹಾನಿ ಪ್ರದೇಶಗಳಿಗ ಭೇಟಿ
ಕೊರೊನಾ ಸೋಂಕಿನಿಂದಾಗಿ ಕಳೆದ 1 ವಾರದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಯಡಿಯೂರಪ್ಪ ಗುಣಮುಖರಾಗಿದ್ದಾರೆ.
ಬೆಂಗಳೂರು (ಆ. 11): ಕೊರೊನಾ ಸೋಂಕಿನಿಂದಾಗಿ ಕಳೆದ 1 ವಾರದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಯಡಿಯೂರಪ್ಪ ಗುಣಮುಖರಾಗಿದ್ದಾರೆ. ಆಸ್ಪತ್ರೆಯಿಂದ ಕಾವೇರಿ ನಿವಾಸಕ್ಕೆ ಆಗಮಿಸಿರುವ ಮುಖ್ಯಮಂತ್ರಿಗಳು 3 ದಿನಗಳ ಕಾಲ ಮನೆಯಿಂದಲೇ ಕಾರ್ಯ ನಿರ್ವಹಿಸಲಿದ್ದಾರೆ. ನಂತರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲು ಚಿಂತನೆ ನಡೆಸಿದ್ದಾರೆ.