ಜೋರಾಗಿದೆ ವರುಣನ ಆರ್ಭಟ: ಉಸ್ತುವಾರಿ ಜಿಲ್ಲೆಯಲ್ಲೇ ವಾಸ್ತವ್ಯ ಹೂಡುವಂತೆ ಸಿಎಂ ಸೂಚನೆ

ಮಹಾಮಳೆಗೆ ರಾಜ್ಯದ 8 ಜಿಲ್ಲೆಗಳು ತತ್ತರಿಸಿ ಹೋಗಿವೆ. ಎಲ್ಲೆಲ್ಲೂ ಅನಾಹುತ, ಅವಾಂತರಗಳು ಸೃಷ್ಟಿಯಾಗಿವೆ. ಆಸ್ಪತ್ರೆಯಲ್ಲೇ ಕುಳಿತು ಮುಖ್ಯಮಂತ್ರಿ ಯಡಿಯೂರಪ್ಪ ವಿವರ ಪಡೆದಿದ್ದಾರೆ. ಉಸ್ತುವಾರಿ ಜಿಲ್ಲೆಯಲ್ಲೇ ವಾಸ್ತವ್ಯ ಹೂಡುವಂತೆ ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ. ಹಾನಿಗೀಡಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಡಿಸಿ, ಸ್ಥಳೀಯ ಶಾಸಕರ ಜತೆಗೂಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 06): ಮಹಾಮಳೆಗೆ ರಾಜ್ಯದ 8 ಜಿಲ್ಲೆಗಳು ತತ್ತರಿಸಿ ಹೋಗಿವೆ. ಎಲ್ಲೆಲ್ಲೂ ಅನಾಹುತ, ಅವಾಂತರಗಳು ಸೃಷ್ಟಿಯಾಗಿವೆ. ಆಸ್ಪತ್ರೆಯಲ್ಲೇ ಕುಳಿತು ಮುಖ್ಯಮಂತ್ರಿ ಯಡಿಯೂರಪ್ಪ ವಿವರ ಪಡೆದಿದ್ದಾರೆ. ಉಸ್ತುವಾರಿ ಜಿಲ್ಲೆಯಲ್ಲೇ ವಾಸ್ತವ್ಯ ಹೂಡುವಂತೆ ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ. ಹಾನಿಗೀಡಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಡಿಸಿ, ಸ್ಥಳೀಯ ಶಾಸಕರ ಜತೆಗೂಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭೋರ್ಗರೆದು ಹರಿಯುತ್ತಿದೆ ಚುಂಚನಕಟ್ಟೆ ಜಲಪಾತ

Related Video