Asianet Suvarna News Asianet Suvarna News

News Hour: ಕುರ್ಚಿ ಬದಲಾವಣೆ ಕೂಗಿಗೆ ‘ಹೈ’ ಬ್ರೇಕ್

ಕುರ್ಚಿ ಬದಲಾವಣೆ ಕೂಗಿಗೆ ಕಾಂಗ್ರೆಸ್‌ ಹೈಕಮಾಂಡ್‌ ಸದ್ಯಕ್ಕೆ ಬ್ರೇಕ್ ಹಾಕಿದೆ. ರಾಜ್ಯಕ್ಕೆ ಭೇಟಿ ನೀಡಿದ ಕೆಸಿ ವೇಣುಗೋಪಾಲ್‌, ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರೊಂದಿಗೆ ಮಾತುಕತೆ ನಡೆಸಿದರು.

First Published Oct 17, 2024, 11:10 PM IST | Last Updated Oct 17, 2024, 11:10 PM IST

ಬೆಂಗಳೂರು (ಅ.17): ಕುರ್ಚಿ ಬದಲಾವಣೆ ಕೂಗಿಗೆ ವೇಣುಗೋಪಾಲ್ ಬ್ರೇಕ್ ಹಾಕಿದ್ದಾರೆ. ಬೈ ಎಲೆಕ್ಷನ್​ ಗೆಲ್ಲಲೇಬೇಕೆಂದು ಸಿಎಂ, ಡಿಸಿಎಂಗೆ ಟಾರ್ಗೆಟ್​ ನೀಡಲಾಗಿದೆ. ಗೊಂದಲದ ಹೇಳಿಕೆ ನೀಡಿದ್ರೆ ಮುಲಾಜಿಲ್ಲದೇ ಕ್ರಮ ಎಂದು ಎಚ್ಚರಿಕೆ ನೀಡಿದ್ದಾರೆ.

ಉಪಚುನಾವಣೆ ವಿಚಾರದಲ್ಲಿ ಮೂರು ಪಕ್ಷದಲ್ಲೂ ಚನ್ನಪಟ್ಟಣ ಟಿಕೆಟ್ ಆಯ್ಕೆ ಫೈಟ್​ ಶುರುವಾಗಿದೆ. ಸಂಡೂರಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ನೀಡಲು ಭಾರಿ ವಿರೋಧ ವ್ಯಕ್ತವಾಗಿದ್ದರೆ, ಶಿಗ್ಗಾಂವಿಯಲ್ಲಿ ಮಗನಿಗೆ ಟಿಕೆಟ್ ಕೊಡಿಸಲು ಬೊಮ್ಮಾಯಿ ಪ್ರಯತ್ನ ಆರಂಭಿಸಿದ್ದಾರೆ.

News Hour: ಮೂರು ಪಕ್ಷಕ್ಕೂ ಅಭ್ಯರ್ಥಿ ಆಯ್ಕೆ ಟೆನ್ಷನ್!

ಹರಿಯಾಣದಲ್ಲಿ ಮೂರನೇ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಿದೆ. ಎರಡನೇ ಬಾರಿ ಸಿಎಂ ಆಗಿ ನಯಾಬ್ ಸಿಂಗ್​ ಪದಗ್ರಹಣ ಮಾಡಿದ್ದಾರೆ. ಕಾರ್ಯಕ್ರಮಕ್ಕೆ   ಮೋದಿ ಸೇರಿ 19 ರಾಜ್ಯಗಳ ಸಿಎಂಗಳು ಭಾಗಿಯಾಗಿದ್ದರು.