Asianet Suvarna News Asianet Suvarna News

Mekedatu Padayatre: ಈ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ.? ಕಾಂಗ್ರೆಸ್ ಜವಾಬ್ದಾರಿಯಿಂದ ವರ್ತಿಸಲಿ: ಆರಗ

ಕೊರೋನಾ (Covid 19): ಹಾವಳಿ ವಿಪರೀತ ಆಗುತ್ತಿರುವ ಕಾರಣಕ್ಕೂ ಪಾದಯಾತ್ರೆ ಕೈಬಿಡುವಂತೆ ಪ್ರತಿಪಕ್ಷ ಕಾಂಗ್ರೆಸ್‌ಗೆ ರಾಜ್ಯ ಸರ್ಕಾರ ನೇರ ಆಗ್ರಹ ಮಾಡಿದೆ. ಅಲ್ಲದೆ, ವಾರಾಂತ್ಯ ಕರ್ಫ್ಯೂದಂತಹ ಕ್ರಮಗಳ ಮೂಲಕ ತಡೆಯೊಡ್ಡುವ ಪ್ರಯತ್ನವನ್ನೂ ನಡೆಸಿದೆ. 

ಬೆಂಗಳೂರು (ಜ. 09): ರಾಜಧಾನಿ (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ (Mekedatu Padayatre) ಹಮ್ಮಿಕೊಂಡಿದೆ. 

Mekedatu Padayatre: ಕೋವಿಡ್ ನಿಯಮ ಪಾಲಿಸಿಯೇ ಪಾದಯಾತ್ರೆ ಮಾಡ್ತೇವೆ: ಕಾಂಗ್ರೆಸ್

ಕೊರೋನಾ ಹಾವಳಿ ವಿಪರೀತ ಆಗುತ್ತಿರುವ ಕಾರಣಕ್ಕೂ ಪಾದಯಾತ್ರೆ ಕೈಬಿಡುವಂತೆ ಪ್ರತಿಪಕ್ಷ ಕಾಂಗ್ರೆಸ್‌ಗೆ ರಾಜ್ಯ ಸರ್ಕಾರ ನೇರ ಆಗ್ರಹ ಮಾಡಿದೆ. ಅಲ್ಲದೆ, ವಾರಾಂತ್ಯ ಕರ್ಫ್ಯೂದಂತಹ ಕ್ರಮಗಳ ಮೂಲಕ ತಡೆಯೊಡ್ಡುವ ಪ್ರಯತ್ನವನ್ನೂ ನಡೆಸಿದೆ. ' ಕೋವಿಡ್ ನಿಯಮ ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಪಾದಯಾತ್ರೆಯನ್ನು ಮುಂದೂಡಿ ಎಂದು ಮನವಿ ಮಾಡಿದ್ದೇವೆ. ಆದರೂ ಪಾದಯಾತ್ರೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ.? ಬೇಡವಾ.? ಎಂದು ಯೋಚಿಸಲಿ. ಕಾಂಗ್ರೆಸ್ ಜವಾಬ್ದಾರಿಯಿಂದ ವರ್ತಿಸಲಿ'  ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.