ಊಹಾಪೋಹಗಳು ಬೇಡ: ಮುನಿರತ್ನ ಮನವಿ!
ತಮ್ಮ ಮನೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ ಮುನಿರತ್ನ, ರಾಜಕಾರಣಿ ಮನೆ ಮುಂದೆ ಸ್ಫೋಟ ಸಂಭವಿಸಿದೆ ಎಂಬ ಕಾರಣಕ್ಕೆ ಮನಸ್ಸಿಗೆ ಬಂದಂತೆ ಮಾತನಾಡುವುದು ಬೇಡ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು(ಮೇ.19): ತಮ್ಮ ಮನೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ ಮುನಿರತ್ನ, ರಾಜಕಾರಣಿ ಮನೆ ಮುಂದೆ ಸ್ಫೋಟ ಸಂಭವಿಸಿದೆ ಎಂಬ ಕಾರಣಕ್ಕೆ ಮನಸ್ಸಿಗೆ ಬಂದಂತೆ ಮಾತನಾಡುವುದು ಬೇಡ ಎಂದು ಮನವಿ ಮಾಡಿದ್ದಾರೆ. ನಮ್ಮ ಕುಟುಂಬ ಆಪ್ತ ವೆಂಕಟೇಶ್ ಸಾವಿನ ನೋವಿನಲ್ಲಿದ್ದು, ದಯವಿಟ್ಟು ಊಹಾಪೋಹಗಳನ್ನು ನಂಬಬೇಡಿ ಎಂದು ಮುನಿರತ್ನ ಮನವಿ ಮಾಡಿದ್ದಾರೆ. ಬೆಂಗಳೂರು ಪೊಲೀಸರ ಕಾರ್ಯಕ್ಷಮತೆ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದ್ದು, ಸೂಕ್ತ ತನಿಖೆ ನಡೆಸುತ್ತಾರೆ ಎಂಬ ಭರವಸೆ ತಮಗಿದೆ ಎಂದು ಅವರು ನುಡಿದಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..