Asianet Suvarna News Asianet Suvarna News

ಸಿಎಂಗೆ ರಕ್ತ ಪರೀಕ್ಷೆ, ಬಿಪಿ, ಶುಗರ್ ಟೆಸ್ಟ್; ಆರೋಗ್ಯದಲ್ಲಿ ಸ್ಥಿರ: ವಿಜಯೇಂದ್ರ

'ಸಿಎಂಗೆ ಯಾವುದೇ ಸಮಸ್ಯೆ ಇಲ್ಲ. ಆರೋಗ್ಯವಾಗಿದ್ದಾರೆ' ಎಂದು ಪುತ್ರ ವಿಜಯೇಂದ್ರ ಸುವರ್ಣ ನ್ಯೂಸ್‌ಗೆ ಹೇಳಿಕೆ ಕೊಟ್ಟಿದ್ದಾರೆ. 

ಬೆಂಗಳೂರು (ಆ. 03): 'ಸಿಎಂಗೆ ಯಾವುದೇ ಸಮಸ್ಯೆ ಇಲ್ಲ. ಆರೋಗ್ಯವಾಗಿದ್ದಾರೆ. ಎಂದು ಪುತ್ರ ವಿಜಯೇಂದ್ರ ಸುವರ್ಣ ನ್ಯೂಸ್‌ಗೆ ಹೇಳಿಕೆ ಕೊಟ್ಟಿದ್ದಾರೆ. 

ಕೋವಿಡ್ ದೃಢಪಟ್ಟ ಹಿನ್ನಲೆಯಲ್ಲಿ ಸಿಎಂ ಬಿಎಸ್‌ವೈ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಿಗ್ಗೆ ನಿಯಮಿತ ಆರೋಗ್ಯ ಪರೀಕ್ಷೆ ಮಾಡಲಾಗಿದೆ. ಬಿಪಿ, ಶುಗರ್ ಟೆಸ್ಟ್ ಮಾಡಲಾಗಿದೆ. ಯಾವುದೇ ಸಮಸ್ಯೆ ಇಲ್ಲ' ಎಂದು ವಿಜಯೇಂದ್ರ ಹೇಳಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಲಿ ಎಂಬುದೇಎಲ್ಲರ ಆಶಯ. 

ಸಿಎಂ ಅನುಪಸ್ಥಿತಿ: ಆಡಳಿತದ ಹೊಣೆ ಇತರರಿಗೆ ವಹಿಸಿದ ಬಿಎಸ್‌ವೈ