ಬೆಂಗಳೂರಿನಲ್ಲಿ ನಿಧಾನವಾಗುತ್ತಿದೆ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ..!
ಬೆಂಗಳೂರಿನಲ್ಲಿ ಕೊರೋನಾ ಪೀಡಿತರ ಸಂಖ್ಯೆ ಆರು ಸಾವಿರದ ಗಡಿ ದಾಟಿದೆ. ಇನ್ನು ನಗರದಲ್ಲೇ0 ನೂರು ಮಂದಿಯನ್ನು ಕೊರೋನಾ ಬಲಿ ಪಡೆದಿದೆ. ಸೋಂಕು ಹರಡದಂತೆ ತಡೆಯುವುದು ಇದೀಗ ಸರ್ಕಾರಕ್ಕೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ.
ಬೆಂಗಳೂರು(ಜು.03): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಮುಂಬೈಗೆ ಸಡ್ಡು ಹೊಡೆಯುವ ರೀತಿಯಲ್ಲಿ ಕೊರೋನಾ ಹಬ್ಬಲಾರಂಭಿಸಿದೆ. ಉದ್ಯಾನನಗರಿಯೀಗ ಕೊರೋನಾ ಅಪಾಯದ ಸುಳಿಗೆ ಸಿಲುಕಿದೆ.
ಬೆಂಗಳೂರಿನಲ್ಲಿ ಕೊರೋನಾ ಪೀಡಿತರ ಸಂಖ್ಯೆ ಆರು ಸಾವಿರದ ಗಡಿ ದಾಟಿದೆ. ಇನ್ನು ನಗರದಲ್ಲೇ ನೂರು ಮಂದಿಯನ್ನು ಕೊರೋನಾ ಬಲಿ ಪಡೆದಿದೆ. ಸೋಂಕು ಹರಡದಂತೆ ತಡೆಯುವುದು ಇದೀಗ ಸರ್ಕಾರಕ್ಕೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ.
ಬೆಂಗಳೂರು: ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೂ ಜಾಗವಿಲ್ಲ..!
ಇನ್ನೂ ಆಘಾತಕಾರಿ ಸಂಗತಿಯೆಂದರೆ ಬೆಂಗಳೂರಿನಲ್ಲಿ ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಕೂಡಾ ಕಡಿಮೆಯಾಗಲಾರಂಭಿಸಿದೆ. ರೋಗಿಗಳ ಸೋಂಕಿನ ಮೂಲ ಹುಡುಕುವುದು ಕಷ್ಟಸಾಧ್ಯ ಎನ್ನುವಂತಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.