BBMP ಕಮಿಷನರ್ ತಲೆದಂಡಕ್ಕೆ ಒತ್ತಡ..!
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಚುರುಕಾಗಿ ಓಡಾಡಿ ಕೊರೋನಾ ನಿಯಂತ್ರಣದ ಬಗ್ಗೆ ಸಾಕಷ್ಟು ತಲೆಕೆಡಿಸಿಕೊಂಡಿದ್ದಾರೆ. ಆದರೆ ಬಿಬಿಎಂಪಿ ಕಮಿಷನರ್ ಮಾತ್ರ ಇದರ ಪರಿವೇ ಇಲ್ಲವೇನೋ ಎಂಬಂತೆ ವರ್ತಿಸುತ್ತಿದ್ದಾರೆ.
ಬೆಂಗಳೂರು(ಜು.16): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಶರವೇಗದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಕೊರೋನಾ ನಿರ್ವಹಣೆಯ ವಿಚಾರದಲ್ಲಿ ವಿಫಲವಾಗಿರುವ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ತಲೆದಂಡಕ್ಕೆ ಒತ್ತಡ ಜೋರಾಗಿದೆ.
ಹೌದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಚುರುಕಾಗಿ ಓಡಾಡಿ ಕೊರೋನಾ ನಿಯಂತ್ರಣದ ಬಗ್ಗೆ ಸಾಕಷ್ಟು ತಲೆಕೆಡಿಸಿಕೊಂಡಿದ್ದಾರೆ. ಆದರೆ ಬಿಬಿಎಂಪಿ ಕಮಿಷನರ್ ಮಾತ್ರ ಇದರ ಪರಿವೇ ಇಲ್ಲವೇನೋ ಎಂಬಂತೆ ವರ್ತಿಸುತ್ತಿದ್ದಾರೆ.
ESI ಕೋವಿಡ್ ಸೆಂಟರ್ನಲ್ಲಿ ನರಕ ದರ್ಶನ..!
ಕಮಿಷನರ್ ನಡೆಯಿಂದ ರಾಜ್ಯಸರ್ಕಾರ ಪ್ರತಿದಿನವೂ ಮುಜುಗರ ಅನುಭವಿಸುವಂತಾಗಿದೆ. ಸಚಿವರು ಕೂಡಾ ಬಿಬಿಎಂಪಿ ಕಮಿಷನರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.