Asianet Suvarna News Asianet Suvarna News

ಭೀಮನ ಅಮಾವಾಸ್ಯೆ: ಗಾಳಿ ಆಂಜನೇಯ ದೇವಸ್ಥಾನಕ್ಕೆ ಭಕ್ತರ ದಂಡು

ಲಾಕ್‌ಡೌನ್ ಇದ್ದರೂ ಕೂಡಾ ಗಾಳಿ ಆಂಜನೇಯ ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಭೀಮನ ಅಮಾವಾಸ್ಯೆ ಹಿನ್ನಲೆಯಲ್ಲಿ ಗಾಳಿ ಆಂಜನೇಯ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ. 

ಬೆಂಗಳೂರು (ಜು. 20): ಲಾಕ್‌ಡೌನ್ ಇದ್ದರು ಕೂಡಾ ಗಾಳಿ ಆಂಜನೇಯ ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಭೀಮನ ಅಮಾವಾಸ್ಯೆ ಹಿನ್ನಲೆಯಲ್ಲಿ ಗಾಳಿ ಆಂಜನೇಯ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ. 

ಇಂದು ಭೀಮನ ಅಮಾವಾಸ್ಯೆ. ನಾಳೆಯಿಂದ ಶ್ರಾವಣ ಮಾಸ ಆರಂಭವಾಗುತ್ತದೆ. ಇಂದು ದೇವರಿಗೆ ಬೆಣ್ಣೆ ಅಲಂಕಾರ ಹಾಗೂ ವಿಶೇಷ ಪೂಜೆ ಸಲ್ಲಿಸಲಾಗಿದೆ. ಕೊರೊನಾ ಸಂಕಷ್ಟ ದೇಶವನ್ನು ಬಿಟ್ಟು ತೊಲಗಲಿ ಎಂದು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗಿದೆ. ಸಂಜೆ ಸಹಸ್ರನಾಮ ಪೂಜೆ ಸಲ್ಲಿಸಲಾಗುತ್ತದೆ. ಎಳ್ಳು ಬತ್ತಿಯನ್ನು ದೇವರಿಗೆ ಹಚ್ಚಲಾಗುತ್ತದೆ ಎಂದು ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ. 

ಸಿಎಂ ಬಿಎಸ್‌ವೈ ನೇತೃತ್ವದಲ್ಲಿಂದು ಕೊರೊನಾ ಟಾಸ್ಕ್‌ ಫೋರ್ಸ್‌ ಸಭೆ