Asianet Suvarna News Asianet Suvarna News

District In-charge: ಸಚಿವರ ಅಸಮಾಧಾನ, ಮೌನಕ್ಕೆ ಶರಣಾದ ಸಿಎಂ

ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಸರ್ಕಾರ ಅಸ್ತಿತಕ್ಕೆ ಬಂದು ಆರು ತಿಂಗಳು ಸಮೀಪಿಸುತ್ತಿರುವ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದೇಶ ಹೊರಬಿದ್ದಿದ್ದು, ಎಲ್ಲ ಸಚಿವರಿಗೂ ತವರು ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಬೆಂಗಳೂರು (ಜ. 25): ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಸರ್ಕಾರ ಅಸ್ತಿತಕ್ಕೆ ಬಂದು ಆರು ತಿಂಗಳು ಸಮೀಪಿಸುತ್ತಿರುವ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದೇಶ ಹೊರಬಿದ್ದಿದ್ದು, ಎಲ್ಲ ಸಚಿವರಿಗೂ ತವರು ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

District In-Charge: ಬೆಂಗಳೂರು ಗ್ರಾಮಾಂತರ ಉಸ್ತುವಾರಿಗೆ ಎಂಟಿಬಿ ಪಟ್ಟು

ಇದುವರೆಗೆ ಕೋವಿಡ್‌ ಮತ್ತು ಅತಿವೃಷ್ಟಿಯ ಉಸ್ತುವಾರಿಗಳನ್ನು ಮಾತ್ರ ನೇಮಿಸಲಾಗಿತ್ತೆ ಹೊರತು ಜಿಲ್ಲಾ ಉಸ್ತುವಾರಿ ಎಂಬುದಾಗಿ ಯಾರಿಗೂ ನಿರ್ದಿಷ್ಟ ಜವಾಬ್ದಾರಿ ಹಂಚಿಕೆ ಮಾಡಿರಲಿಲ್ಲ. ಆದರೂ ಬಹುತೇಕ ಎಲ್ಲ ಸಚಿವರೂ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೇ ನಿಭಾಯಿಸುತ್ತಿದ್ದರು. ಇದೀಗ ಹಲವು ಬದಲಾವಣೆಗಳೊಂದಿಗೆ ಉಸ್ತುವಾರಿಗಳ ಪಟ್ಟಿಅಧಿಕೃತವಾಗಿ ಪ್ರಕಟಗೊಂಡಿದೆ. ಜಿಲ್ಲಾ ಉಸ್ತುವಾರಿ ಹಂಚಿಕೆ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಆದರೆ ಇದರ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ನಿರಾಕರಿಸಿದ್ದಾರೆ.