ಡಿಕೆಶಿಗೆ ಬಿಡುಗಡೆ ಭಾಗ್ಯ: ತುಂಬಾ ನೋವಿನ ವಿಚಾರ ಬಿಚ್ಚಿಟ್ಟ ದೇವೇಗೌಡ್ರು
ಜಾರಿ ನಿರ್ದೇಶನಾಲಯ (ED) ವಶದಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ಗೆ ಕೊನೆಗೂ ಜಾಮೀನು ಸಿಕ್ಕಿದೆ. ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಬಂಧನಕ್ಕೊಳಗಾಗಿದ್ದರು. ತಿಹಾರ್ ಜೈಲಿನಲ್ಲಿರುವ ಡಿಕೆಶಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.
ಬೆಂಗಳೂರು (ಅ.23): ಜಾರಿ ನಿರ್ದೇಶನಾಲಯ (ED) ವಶದಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ಗೆ ಕೊನೆಗೂ ಜಾಮೀನು ಸಿಕ್ಕಿದೆ. ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಬಂಧನಕ್ಕೊಳಗಾಗಿದ್ದರು. ತಿಹಾರ್ ಜೈಲಿನಲ್ಲಿರುವ ಡಿಕೆಶಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.
ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಡಿಕೆಶಿಗೆ ಜಾಮೀನು ಸಿಕ್ಕಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಇಡೀ ಪ್ರಕರಣದಲ್ಲಿ ತುಂಬಾ ನೋವು ಅನುಭವಿಸಿದ ಒಂದು ವಿಚಾರವನ್ನೂ ಬಹಿರಂಗಪಡಿಸಿದರು.