ಜು. 19 ರಂದು ಸಿದ್ದು, ಡಿಕೆಶಿ ದೆಹಲಿಗೆ, ‘ಮುಂದಿನ ಸಿಎಂ’ ವಿವಾದಕ್ಕೆ ಬ್ರೇಕ್‌ ಸಂಭವ

- ಸಿದ್ದು, ಡಿಕೆಶಿ ನಾಳೆ ಸಂಜೆ ದೆಹಲಿಗೆ- ರಾಜ್ಯ ರಾಜಕಾರಣ ಚರ್ಚೆಗೆ ಹೈಕಮಾಂಡ್‌ ಬುಲಾವ್‌- ಜು. 19 ರ ಸಂಜೆ 4ಕ್ಕೆ ಇಬ್ಬರ ಜತೆಗೂ ರಾಗಾ ಮಾತುಕತೆ- ಒಳಬೇಗುದಿ ಶಮನ, ಪದಾಧಿಕಾರಿಗಳ ನೇಮಕ ಚರ್ಚೆ 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 18): ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಹೈಕಮಾಂಡ್‌ ಬುಲಾವ್‌ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.

Add Asianetnews Kannada as a Preferred SourcegooglePreferred

ರಾಜ್ಯ ಕಾಂಗ್ರೆಸ್‌ನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ!

ಮಂಗಳವಾರ ಸಂಜೆ 4ಕ್ಕೆ ಉಭಯ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಉಭಯ ನಾಯಕರೊಂದಿಗೆ ಮೊದಲು ಪ್ರತ್ಯೇಕವಾಗಿ ಚರ್ಚೆ ನಡೆಯಲಿದೆ. ಈ ಚರ್ಚೆ ನಂತರ ಉಭಯ ನಾಯಕರೊಂದಿಗೂ ಒಗ್ಗೂಡಿ ಸಭೆ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್‌ ಬಣಗಳ ನಡುವೆ ನಡೆದಿರುವ ಪೈಪೋಟಿಗೆ ಹೈಕಮಾಂಡ್‌ ವರಿಷ್ಠರು ಈ ಸಂದರ್ಭದಲ್ಲಿ ಬ್ರೇಕ್‌ ಹಾಕುವ ಸಾಧ್ಯತೆಯಿದೆ. 

Related Video