Asianet Suvarna News Asianet Suvarna News

ಕಾಂಗ್ರೆಸ್‌ನವರು ಮೊಸರಲ್ಲಿ ಕಲ್ಲು ಹುಡುಕೋದು ಬಿಡಬೇಕು: ಕಾಂಗ್ರೆಸ್‌ ವಿರುದ್ಧ ಸಚಿವ ಸುಧಾಕರ್‌ ಕಿಡಿ

ಕಾಂಗ್ರೆಸ್‌ ಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬಿಡಬೇಕು| ಹಗರಣಗಳಿಂದಲೇ ಕಾಂಗ್ರೆಸ್‌ ಸರ್ಕಾರ ಉರುಳಿ ಹೋಗಿದೆ|ಯಾರು ಎಲ್ಲಿಗೆ ಹೋಗಿ ಬಂದಿದ್ದಾರೆ ಅಂತ ಹೇಳಬೇಕಾಗುತ್ತದೆ ಎಂದು ಕೈ ನಾಯಕರಿಗೆ ಎಚ್ಚರಿಕೆ ನೀಡಿದ ಸಚಿವ ಡಾ. ಕೆ. ಸುಧಾಕರ್‌|

ಬೆಂಗಳೂರು(ಜು.11): ಕಾಂಗ್ರೆಸ್‌ ಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬಿಡಬೇಕು, ಇಲ್ಲಾಂದ್ರೆ ಒಬ್ಬೊಬ್ಬ ಕಾಂಗ್ರೆಸ್‌ನವರ ಜಾತಕವನ್ನ ಬಿಚ್ಚಿಡಬೇಕಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರು ಕೈ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. 

ಕೊರೋನಾ ಆರ್ಭಟ: ಸೆಕೆಂಡ್‌ ಸಂಡೇ ಲಾಕ್‌ಡೌನ್‌ಗೆ ಕೌಂಟ್‌ಡೌನ್‌

ಹಗರಣಗಳಿಂದಲೇ ಕಾಂಗ್ರೆಸ್‌ ಸರ್ಕಾರ ಉರುಳಿ ಹೋಗಿದೆ. ಯಾರು ಎಲ್ಲಿಗೆ ಹೋಗಿ ಬಂದಿದ್ದಾರೆ ಅಂತ ಹೇಳಬೇಕಾಗುತ್ತದೆ. ಆರೋಗ್ಯ ಇಲಾಖೆಯಲ್ಲಿ ಯಾವುದೇ ಭಷ್ಟಾಚಾರ ನಡೆದಿಲ್ಲ ಎಂದು ಹೇಳಿದ್ದಾರೆ.