Asianet Suvarna News Asianet Suvarna News

ಕೊರೊನಾ ಜೊತೆಯೇ ಬದುಕಬೇಕು, ಮತ್ತೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ: ಡಿಸಿಎಂ

ಮತ್ತೊಮ್ಮೆ ಲಾಕ್‌ಡೌನ್ ಮಾಡಲ್ಲ. ಯಾರಿಗೂ ಭಯಬೇಡ. ಕೊರೊನಾ ವೈರಸ್ ನಮ್ಮ ಜೊತೆಯೇ ಇರುತ್ತದೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ತೆರೆ ಎಳೆದಿದ್ದಾರೆ. 

ಬೆಂಗಳೂರು (ಜೂ. 22): ಲಾಕ್‌ಡೌನ್ ಮಾಡಲ್ಲ. ಯಾರಿಗೂ ಭಯಬೇಡ. ಕೊರೊನಾ ವೈರಸ್ ನಮ್ಮ ಜೊತೆಯೇ ಇರುತ್ತದೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ತೆರೆ ಎಳೆದಿದ್ದಾರೆ. 

ವಾರಿಯರ್ಸ್‌ಗೆ ಕೋವಿಡ್ 19 ಕಾಟ; ಇಬ್ಬರು ವೈದ್ಯರಿಗೆ ಪಾಸಿಟೀವ್

ಇನ್ನು ಕನಕಪುರ ಲಾಕ್‌ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಗರಂ ಆಗಿದ್ದಾರೆ. ಡಿಕೆಶಿ ಅವರು ಲಾಕ್‌ಡೌನ್ ಹೇರಲು ಸಾಧ್ಯವಿಲ್ಲ. ಕೇವಲ ಸಲಹೆ ಕೊಡಬಹುದಷ್ಟೇ ಎಂದರು. ಇನ್ನೂ ಮುಂದುವರೆದು ' ಕೋವಿಡ್ ಹೆಚ್ಚಾಗುತ್ತಿರುವ ಬಗ್ಗೆ ಮಾತನಾಡಿ, ಕೋವಿಡ್ ಚಿಕಿತ್ಸೆಗೆ ನಮ್ಮಲ್ಲಿ ಎಲ್ಲಾ ವ್ಯವಸ್ಥೆ ಇದೆ. ಸಮರ್ಥವಾಗಿ ನಾವು ಕಂಟ್ರೋಲ್ ಮಾಡುತ್ತಿದ್ದೇವೆ' ಎಂದಿದ್ದಾರೆ.