ಜಾಮೀನು ಸಿಕ್ಕರೂ ಡಿಕೆಶಿಗೆ ತಪ್ಪದ ಸಂಕಷ್ಟ?
ಸತತ ಕಾನೂನು ಹೋರಾಟದ ಬಳಿಕ ಕೊನೆಗೂ ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ಗೆ ಜಾಮೀನು ಸಿಕ್ಕಿದೆ. ಹವಾಲಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಹಕರಿಸದಿರುವ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ಅವರನ್ನು ಕಳೆದ ತಿಂಗಳು ಬಂಧಿಸಿತ್ತು.
ಬೆಂಗಳೂರು/ ನವದೆಹಲಿ (ಅ.23): ಸತತ ಕಾನೂನು ಹೋರಾಟದ ಬಳಿಕ ಕೊನೆಗೂ ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ಗೆ ಜಾಮೀನು ಸಿಕ್ಕಿದೆ. ಹವಾಲಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಹಕರಿಸದಿರುವ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ಅವರನ್ನು ಕಳೆದ ಸೆ.03ರಂದು ಬಂಧಿಸಿತ್ತು.
ED ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆಶಿಗೆ ಕೊನೆಗೂ ರಿಲೀಫ್ ಸಿಕ್ಕಿದೆ.
ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ED ಸುಪ್ರೀಂ ಕೋರ್ಟ್ ಮೊರೆ ಹೋಗುವ ಚಿಂತನೆ ನಡೆಸಿದೆ.