Asianet Suvarna News Asianet Suvarna News

ಸಿಎಂ ವಿರುದ್ಧ ಗೌರ್ನರ್‌ಗೆ ದೂರು; ಈಶ್ವರಪ್ಪ ವಿರುದ್ಧ ಸಚಿವ, ಶಾಸಕರ ಕಿಡಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆ ಸಚಿವ ಕೆ.ಎಸ್‌.ಈಶ್ವರಪ್ಪ ಯಡಿಯೂರಪ್ಪ ಕಾರ್ಯವೈಖರಿ ವಿರುದ್ಧ ಸಿಡಿದಿದ್ದು, ನೇರವಾಗಿ ರಾಜ್ಯಪಾಲರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. 

ಬೆಂಗಳೂರು (ಏ. 02): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆ ಸಚಿವ ಕೆ.ಎಸ್‌.ಈಶ್ವರಪ್ಪ ಯಡಿಯೂರಪ್ಪ ಕಾರ್ಯವೈಖರಿ ವಿರುದ್ಧ ಸಿಡಿದಿದ್ದು, ನೇರವಾಗಿ ರಾಜ್ಯಪಾಲರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ರಾಜ್ಯದ ಇತರ 29 ಜಿಲ್ಲೆಗಳನ್ನು ಕಡೆಗಣಿಸಿ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಗೆ ಮಾತ್ರ 65 ಕೋಟಿ ರು. ಅನುದಾನವನ್ನು ಒದಗಿಸಿರುವುದು ಈಶ್ವರಪ್ಪ ಅವರ ಪ್ರಮುಖ ಆಕ್ಷೇಪಣೆಯಾಗಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಮರಿಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತರು ಎನ್ನಲಾಗಿದೆ. ಈಶ್ವರಪ್ಪ ಅವರ ನಡೆಗೆ ಹಲವು ಸಚಿವರು ಹಾಗೂ ಆಡಳಿತಾರೂಢ ಬಿಜೆಪಿಯ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏನಿದು ಪಕ್ಷದಲ್ಲಿಯೇ ಭಿನ್ನಾಭಿಪ್ರಾಯ..? 
 

Video Top Stories