Asianet Suvarna News Asianet Suvarna News

Mysuru: ಒಂದೇ ದೋಣಿಯಲ್ಲಿ ಯತೀಂದ್ರ-ವಿಜಯೇಂದ್ರ ಬೋಟ್‌ ವಿಹಾರ

ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವ ವೇಳೆ ಮಾಜಿ ಮುಖ್ಯಮಂತ್ರಿಗಳ ಮಕ್ಕಳಾದ ಯತೀಂದ್ರ ಸಿದ್ದರಾಮಯ್ಯ ಮತ್ತು ಬಿ.ವೈ.ವಿಜಯೇಂದ್ರ ಅವರು ಜತೆಯಾಗಿ ದೋಣಿ ವಿಹಾರ ನಡೆಸಿದ್ದು ವಿಶೇಷವಾಗಿತ್ತು.

ಮೈಸೂರು (ಜ.19): ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವ ವೇಳೆ ಮಾಜಿ ಮುಖ್ಯಮಂತ್ರಿಗಳ ಮಕ್ಕಳಾದ ಯತೀಂದ್ರ ಸಿದ್ದರಾಮಯ್ಯ ಮತ್ತು ಬಿ.ವೈ.ವಿಜಯೇಂದ್ರ ಅವರು ಜತೆಯಾಗಿ ದೋಣಿ ವಿಹಾರ ನಡೆಸಿದ್ದು ವಿಶೇಷವಾಗಿತ್ತು. ಜಾತ್ರೆ ಅಂಗವಾಗಿ ಆಯೋಜಿಸಿದ್ದ ದೋಣಿ ವಿಹಾರ ಕಾರ್ಯಕ್ರಮದಲ್ಲಿ ದೋಣಿ ವಿಹಾರ ಕಾರ್ಯಕ್ರಮ ಬುಧವಾರ ಆಯೋಜಿಸಲಾಗಿತ್ತು. ದೋಣಿ ವಿಹಾರವನ್ನು ಶಾಸಕ ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಪಿಲಾ ನದಿಯಲ್ಲಿ ನಡೆದ ದೋಣಿ ವಿಹಾರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆಗಿರುವ ವಿಜಯೇಂದ್ರ ಅವರು ದೋಣಿ ಮುನ್ನಡೆಸಿದರೆ, ಯತೀಂದ್ರ ಅವರು ಅವರ ಪಕ್ಕದಲ್ಲೇ ಮುಂದೆ ಕೂತಿದ್ದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕರಾದ ನಿರಂಜನ ಕುಮಾರ್‌ ಇತರರು ಇದ್ದರು.

Video Top Stories